Webdunia - Bharat's app for daily news and videos

Install App

ಗುಡ್ಡಕುಸಿತ: ಶಿರಾಡಿ ಘಾಟ್ ಬಂದ್, ಬೆಂಗಳೂರು– ಮಂಗಳೂರು ಸಂಪರ್ಕ ಕಡಿತ

Sampriya
ಗುರುವಾರ, 26 ಜೂನ್ 2025 (18:07 IST)
Photo Credit X
ಹಾಸನ: ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡಕುಸಿತವಾಗಿದ್ದು ಇದರಿಂದ ಬೆಂಗಳೂರು-ಮಂಗಳೂರು  ಸಂಪರ್ಕ ಕಡಿತವಾಗಿದೆ.

ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಗುಡ್ಡ ಕುಸಿದ ಕಾರಣ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ತಡರಾತ್ರಿ ಮರಗಳ ಸಮೇತ ರಸ್ತೆಗೆ ಅಡ್ಡಲಾಗಿ ಗುಡ್ಡ ಕುಸಿದ ಕಾರಣ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ. 

ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುವ ವಾಹನಗಳನ್ನು ಹಾಸನದಿಂದ ಬೇಲೂರು ಮಾರ್ಗವಾಗಿ ಚಾರ್ಮುಡಿ ಘಾಟ್ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಆದೇಶ ಮಾಡಿದ್ದಾರೆ.

ಮಂಗಳೂರಿಂದ ಬರುವ ವಾಹನಗಳು ಸಂಪಾಜೆ ಮತ್ತು ಚಾರ್ಮುಡಿ ಘಾಟ್ ಮಾರ್ಗದಲ್ಲಿ ಸಂಚರಿಸಲಿವೆ ಎಂದು ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶುಭಾಂಶು ಶುಕ್ಲಾ ಹೊರಟಿದ್ದ ಸ್ಪೇಸ್ ಎಕ್ಸ್ ಡ್ರ್ಯಾಗನ್ ನೌಕೆ ಯಶಸ್ವೀ ಡಾಕಿಂಗ್

ಕೃತಕ ಫುಡ್‌ ಕಲರ್‌ ಬೆನ್ನಲ್ಲೇ ಕೆಲ ಔಷಧಗಳು, ಸೌಂದರ್ಯವರ್ಧಕಗಳ ಬಳಕೆಗೆ ನಿಷೇಧ ಹೇರಿದ ರಾಜ್ಯ ಸರ್ಕಾರ

ರೈಲ್ವೆ ಹಳಿಗಳ ಮೇಲೆ ಕಾರು ಚಲಾಯಿಸಿ ಮಹಿಳೆಯ ಹುಚ್ಚಾಟ, Video

ವಯನಾಡು ಭೂಕುಸಿತದ ವೇಳೆ ನಿರ್ಮಾಣವಾಗಿದ್ದ ಬೈಲಿ ಸೇತುವೆ ಗೋಡೆ ಬಿರುಕು: ಸಂಚಾರ ಸ್ಥಗಿತ

ವಿಮಾನ ದುರಂತಕ್ಕೆ ಕಾರಣ ಹುಡುಕುತ್ತಿದ್ದ ಅಧಿಕಾರಿಗಳಿಗೆ ಸಿಕ್ತು ಬಿಗ್‌ ಅಪ್ಡೇಟ್‌

ಮುಂದಿನ ಸುದ್ದಿ