Webdunia - Bharat's app for daily news and videos

Install App

ಭಾರೀ ಮಳೆಗೆ ದಕ್ಷಿಣ ಕನ್ನಡದ ಹಲವೆಡೆ ಭೂಕುಸಿತ: ಬೆಂಗಳೂರು–ಮಂಗಳೂರು ಹೆದ್ದಾರಿ ಸಂಪರ್ಕ ಕಡಿತ

Sampriya
ಗುರುವಾರ, 17 ಜುಲೈ 2025 (14:05 IST)
Photo Credit X
ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಣ್ಣಗುಂಡಿ ಬಳಿ ಭೂಕುಸಿತ ಉಂಟಾಗಿದ್ದು, ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಅಡಚಣೆಯಾಗಿದೆ. 

ಭಾರೀ ಮಳೆಗೆ ಮಣ್ಣಗುಂಡಿ ಬಳಿ ಭೂಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿ-75ರ ಮೇಲೆ ಎರಡು ಬದಿ ಮಣ್ಣು ಕುಸಿದಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಸಾಗುವ ಲಾರಿ, ಬಸ್, ಟ್ರಕ್‌ಗಳ ಸಂಚಾರ ಸ್ಥಗಿತಗೊಂಡಿದೆ. ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚರಿಸಲು ಯಾವುದೇ ಅಡಚಣೆ ಇಲ್ಲ, ಧರ್ಮಸ್ಥಳ ಕ್ರಾಸ್‌ನಿಂದ ಸ್ವಲ್ಪ ಮುಂದೆ ಕುಸಿತ ಉಂಟಾಗಿದೆ. ನೆಲ್ಯಾಡಿ ಬಳಿ ಎಡಕ್ಕೆ ಹೋಗಿ ಕೊಕ್ಕಡ ಮಾರ್ಗವಾಗಿ ರಾ.ಹೆ.75 ತಲುಪಲು ಅವಕಾಶವಿದೆ. 

ಮಂಗಳೂರಿನ ಕದ್ರಿ ಹಿಲ್ಸ್ನ ಸರ್ಕ್ಯೂಟ್ ಹೌಸ್ ಬಳಿಯ ರಸ್ತೆಗೆ ಬೃಹತ್ ಗುಡ್ಡ ಕುಸಿತವಾಗಿದ್ದು, ಭಾರೀ ಪ್ರಮಾಣದ ಕಲ್ಲು, ಮಣ್ಣು ರಸ್ತೆಗೆ ಬಿದ್ದಿದೆ. ವಾಹನ ಸಂಚಾರ ಇರುವ ಈ ರಸ್ತೆಗೆ ರಾತ್ರಿ ವೇಳೆ ಗುಡ್ಡ ಬಿದ್ದಿರೋದ್ರಿಂದ ಯಾವುದೇ ಅನಾಹುತಗಳಾಗಿಲ್ಲ. 

ಮೇರಿಹಿಲ್‌ನ ಕೆನರಾ ವಿಕಾಸ ಕಾಲೇಜಿನ ಕಾಂಪೌಂಡ್ ಗೋಡೆ ಬುಧವಾರ ತಡರಾತ್ರಿ ಕುಸಿದು ಬಿದ್ದಿದ್ದು, ಕಾಂಪೌಂಡ್ ಪಕ್ಕ ನಿಲ್ಲಿಸಿದ್ದ 16 ಬೈಕ್ ಹಾಗೂ ಒಂದು ಇನೋವಾ ಕಾರ್ ಸಂಪೂರ್ಣವಾಗಿ ಹಾನಿಯಾಗಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರತಿ ಮನೆಗೆ ಉಚಿತ ವಿದ್ಯುತ್ ಘೋಷಿಸಿದ ಬಿಹಾರ ಸಿಎಂ ನಿತೀಶ್‌

ಭಾರೀ ಮಳೆಗೆ ದಕ್ಷಿಣ ಕನ್ನಡದ ಹಲವೆಡೆ ಭೂಕುಸಿತ: ಬೆಂಗಳೂರು–ಮಂಗಳೂರು ಹೆದ್ದಾರಿ ಸಂಪರ್ಕ ಕಡಿತ

ರಸ್ತೆ ನಿರ್ಮಿಸಲು ಮೋದಿಗೆ ಪತ್ರ ಬರೆದ ಬಾಲಕಿ: ಕಾಂಗ್ರೆಸ್ ಕೈಲಿ ಅದೂ ಆಗಲ್ವಾ ಎಂದು ಬಿಜೆಪಿ ಟೀಕೆ

ವಿರಾಟ್ ಕೊಹ್ಲಿ ವಿಡಿಯೋ ತೋರಿಸಿ ಚಿನ್ನಸ್ವಾಮಿ ದುರಂತಕ್ಕೆ ಆರ್ ಸಿಬಿಯೇ ಕಾರಣ ಎಂದ ಸರ್ಕಾರ

ಮೈಸೂರಿಗೆ ಬೀಗರೂಟಕ್ಕೆ ಬರಕ್ಕಾಗುತ್ತೆ, ಸಿಗಂದೂರಿಗೆ ಬರಕ್ಕಾಗಲ್ವಾ: ಸಿಎಂಗೆ ಪ್ರತಾಪ್ ಸಿಂಹ ಗುದ್ದು

ಮುಂದಿನ ಸುದ್ದಿ
Show comments