ಭಾರತ ಬಂದ್ ಗೆ ಲಾರಿ ಮಾಲೀಕರ ಸಂಘ ಬೆಂಬಲ

Webdunia
ಭಾನುವಾರ, 9 ಸೆಪ್ಟಂಬರ್ 2018 (17:10 IST)
ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಭಾರತ್ ಬಂದ್ ಗೆ ಕರೆ ಕೊಟ್ಟ ಹಿನ್ನಲೆಯಲ್ಲಿ
 ಬಂದ್ ಗೆ ಲಾರಿ ಮಾಲೀಕರ ಸಂಘ ಬೆಂಬಲ‌ ವ್ಯಕ್ತಪಡಿಸಿದೆ.
ತೈಲ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರಕಾರದ ಕ್ರಮ ಖಂಡಿಸಿ ಕರೆ ನೀಡಿರುವ ಭಾರತ ಬಂದ್ ಗೆ  ಮೈಸೂರು ಸಿಟಿ ಲೋಕಲ್ ಲಾರಿ ಮಾಲೀಕರ ಸಂಘ ಬೆಂಬಲ ವ್ಯಕ್ತಪಡಿಸಿದೆ. ಈ ವಿಷಯವನ್ನು ಸಂಘದ ಕಾರ್ಯದರ್ಶಿ ಸೋಮಣ್ಣ‌ ಹೇಳಿದ್ದಾರೆ.
ಯಾರೇ ಬಂದ್‌ ಗೆ ಕರೆ‌ ಕೊಟ್ಟಿದ್ದರೂ ನಾವು ಬೆಂಬಲ ನೀಡುತ್ತಿದ್ದೇವೆ. ಆ ಪಕ್ಷ ಈ ಪಕ್ಷ ಅಂತ‌ ಇಲ್ಲ. ಜನರ ಸಮಸ್ಯೆ ಬಗೆಹರಿಯಬೇಕು ಅಷ್ಟೆ. ಮೂರು ತಿಂಗಳಲ್ಲಿ ಡಿಸೇಲ್ ಬೆಲೆ ದುಪ್ಪಟ್ಟಾಗಿದೆ. ಕೇಂದ್ರ ಸರ್ಕಾರ ನಮಗೆ ಹಿಂದೆಯೂ ಭರವಸೆ ನೀಡಿತ್ತು. ಆದರೆ ಯಾವುದನ್ನು ಕಾರ್ಯ ರೂಪಕ್ಕೆ ತರುತ್ತಿಲ್ಲ. ನಾವು ಸಹ ಹಿಂದೆ ತೈಲ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ್ದೇವೆ. ಆಗಲು ನಮ್ಮ ಭರವಸೆ ಈಡೇರಿಸುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಇಂದಿನವರೆಗೂ ಯಾವುದೇ ಭರವಸೆ ಈಡೇರಿಸಿಲ್ಲ. ಅದಕ್ಕಾಗಿ ನಾವು  ಬಂದ್ ಗೆ ಸಂಪೂರ್ಣ ಬೆಂಬಲ‌ ನೀಡುತ್ತೇವೆ ಎಂದು ಲಾರಿ ಮಾಲೀಕರ ಸಂಘದ ಕಾರ್ಯದರ್ಶಿ ಸೋಮಣ್ಣ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments