Webdunia - Bharat's app for daily news and videos

Install App

ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಬೇಕಾ, ಹೇಗೆ ಮಾಡೋದು, ಕೊನೆಯ ದಿನಾಂಕ ಯಾವುದು ನೋಡಿ

Krishnaveni K
ಬುಧವಾರ, 7 ಆಗಸ್ಟ್ 2024 (10:08 IST)
ಬೆಂಗಳೂರು: ರೇಷನ್ ಕಾರ್ಡ್ ಗೆ ತಿದ್ದುಪಡಿ ಮಾಡಲು ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಅವಕಾಶ ನೀಡಿದೆ. ಇದರ ಕೊನೆಯ ದಿನಾಂಕ, ಹೇಗೆ ತಿದ್ದುಪಡಿ ಮಾಡುವುದು ಇತ್ಯಾದಿ ವಿವರ ಇಲ್ಲಿದೆ.

ರೇಷನ್ ಕಾರ್ಡ್ ಗೆ ತಿದ್ದುಪಡಿ ಮಾಡಲು ಸರ್ಕಾರ ಆಗಸ್ಟ್ 10 ರವರೆಗೆ ಅವಕಾಶ ನೀಡಿದೆ. ಈ ದಿನದೊಳಗೆ ಅರ್ಜಿ ಸಲ್ಲಿಸಿ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡುವುದಿದ್ದರೆ ಮಾಡಿಕೊಳ್ಳಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಆಗಸ್ಟ್ 10 ರೊಳಗೆ ತಿದ್ದುಪಡಿ ಮಾಡಬಹುದಾಗಿದೆ.

ಏನೆಲ್ಲಾ ದಾಖಲೆಗಳು ಬೇಕು?
ಅರ್ಜಿದಾರರ ಆಧಾರ್ ಕಾರ್ಡ್ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆ, ಹಾಲಿ ಪಡಿತರ ಚೀಟಿ ಅಗತ್ಯವಾಗಿ ಬೇಕಾಗುತ್ತದೆ.

ಏನೆಲ್ಲಾ ತಿದ್ದುಪಡಿ ಮಾಡಬಹುದು
ಸದಸ್ಯರ ಹೆಸರು ತಪ್ಪಾಗಿದ್ದಲ್ಲಿ ತಿದ್ದುಪಡಿ
ಮನೆ ಯಜಮಾನರ ಹೆಸರು ಬದಲಾವಣೆ
ಹೊಸ ಸದಸ್ಯರ ಸೇರ್ಪಡೆ
ವಿಳಾಸ ಬದಲಾವಣೆ
ಮೃತರ ಹೆಸರು ತೆಗೆಯುವುದು
ಫೋಟೊ ಮತ್ತು ಬಯೋಮೆಟ್ರಿಕ್ ಅಪ್ಡೇಟ್

ಆಫ್ ಲೈನ್ ಆಗಿ ಎಲ್ಲಿ ತಿದ್ದುಪಡಿ ಮಾಡಬೇಕು?
ಆಫ್ ಲೈನ್ ಆಗಿ ತಿದ್ದುಪಡಿ ಮಾಢುವುದಿದ್ದರೆ ಹತ್ತಿರುವಿರುವ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಕ್ಕೆ ಮೇಲೆ ಹೇಳಿದ ದಾಖಲೆಯೊಂದಿಗೆ ತೆರಳಿ ಆನ್ ಲೈನ್ ನಲ್ಲಿ ತೆರಳಿ ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments