Webdunia - Bharat's app for daily news and videos

Install App

ರಾಜಧಾನಿಯಲ್ಲಿ ತಡ ರಾತ್ರಿಯಿಂದ ಒಂದೇ ಸಮನೆ ಸುರಿದ ಮಳೆ

Webdunia
ಬುಧವಾರ, 6 ಅಕ್ಟೋಬರ್ 2021 (19:16 IST)
ಬೆಂಗಳೂರು: ನಗರದ ಹಲವು ಭಾಗಗಳಲ್ಲಿ ಮಂಗಳವಾರ ತಡ ರಾತ್ರಿಯಿಂದ ಭಾರಿ ಮಳೆ ಬೆಳಗಿನ ಜಾವದವರೆಗೂ ಸುರಿಯಿತು. ಕೆಲವು ರಸ್ತೆ ಹಾಗೂ ತಗ್ಗುಪ್ರದೇಶಗಳಲ್ಲಿ ನೀರು ನುಗ್ಗಿ ಕೊಚ್ಚೆ ಗುಂಡಿಯ ವಾತಾವರಣ ಕಂಡು ಬಂದಿದೆ. ತಡ ರಾತ್ರಿಯಿಂದ ಮಳೆ ಪ್ರಾರಂಭವಾಗಿದ್ದರಿಂದ ವಾಹನ ಸವಾರರರಿಗೆ ತೊಂದರೆಯಾಗಿಲ್ಲವಾದರೂ ಇಂದು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ಎದುರಾಗಿದೆ.
 
ಹಲವೆಡೆ ಮಳೆ: 
 
ನಗರದ ಆರ್.ಆರ್. ನಗರ, ಅಂಜನಪುರ, ಬೇಗೂರು, ಯಲಹಂಕ, ವಿದ್ಯಾಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೆಸ್ ಗುಟ್ಟಹಳ್ಳಿ, ಮಲ್ಲೇಶ್ವರ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಾಪೀಠ, ಕೆಂಗೇರಿ ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಸದಾಶಿವನಗರ, ಯಶವಂತಪುರ, ಹೂಡಿ, ವಿಶ್ವನಾಥನಾಗೇನಹಳ್ಳಿ, ರಾಮಮೂರ್ತಿನಗರ, ಕಾಡುಗೋಡಿ, ಮನೋರಾಯಯನಪಾಳ್ಯ, ಹೊರಮಾವು, ಬಸವನಪುರ, ದೊಡ್ಡನೆಕುಂದಿ, ಕೊಟ್ಟಿಗೆಪಾಳ್ಯ, ಬಾಣಸವಾಡಿ, ಚೊಕ್ಕಸಂದ್ರ, ಪೀಣ್ಯ, ವಿದ್ಯಾಾರಣ್ಯಪುರ, ಅತ್ತೂರು, ಕೆಂಪೇಗೌಡ ವಾರ್ಡ್, ಬಾಗಲಗುಂಟೆ, ದೊಡ್ಡಬೊಮ್ಮಸಂದ್ರ, ಬ್ಯಾಾಟರಾಯನಪುರ, ಹೆಗ್ಗನಹಳ್ಳಿ, ಕಲ್ಯಾಣನಗರ, ಬೆಳ್ಳಂದೂರು, ಸಿಂಗಸಂದ್ರ ಸೇರಿದಂತೆ ಬಹುತೇಕ ಕಡೆ  ಮಳೆಯಾಗಿದೆ.
 
ಪ್ರಮುಖ ರಸ್ತೆಗಳಲ್ಲಿ ನೀರು:
 
ಭಾರಿ ಮಳೆಗೆ ಮಲ್ಲೇಶ್ವರ, ಮೈಸೂರು ರಸ್ತೆ, ರಾಜಭವನ ರಸ್ತೆ, ಶಿವಾಜಿನಗರ, ರಾಜಾಜಿನಗರ, ಪ್ಯಾಲೆಸ್ ಗುಟ್ಟಹಳ್ಳಿ, ಹಲಸೂರು, ಶಿವಾನಂದ ವೃತ್ತ, ಕೆ.ಆರ್.ಪುರ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನೀರು ನಿಂತುಕೊಂಡಿದ್ದು ಕಂಡು ಬಂದಿತು. ಪಾಲಿಕೆಯ ವಿವಿಧ ಅಭಿವೃದ್ಧಿ ಕಾಮಗಾರಿ ಸ್ಥಳಗಳಲ್ಲಿ ನೀರು ನಿಂತಿದ್ದ ದೃಶ್ಯ ಕೂಡ ಕಂಡುಬಂದಿದ್ದು ಪಾಲಿಕೆ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಶಿಥಿಲ ಕಟ್ಟಡಗಳು, ಮರಗಳು ಪದಚಾರಿಗಳ ಮೇಲೆ ಬೀಳುವ ಎಲ್ಲಾ ಸಾಧ್ಯತೆಗಳು ಕಂಡು ಬರುತ್ತಿದ್ದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments