ಪೊಲೀಸ್ ಗೃಹ ನಿರ್ಮಾಣ ಸಂಘದಿಂದ ಸೈಟ್ ಹಂಚಿಕೆ ಮಾಡದೆ ದೋಖಾ: ನ್ಯಾಯ ಒದಗಿಸುವಂತೆ ಖಾಕಿ ಪಡೆ ಸಿಬ್ಬಂದಿ ಡಿ.ಜಿ.ಪಿ ಪ್ರವೀಣ್ ಸೂದ್ ರಿಗೆ ಪತ್ರ

Webdunia
ಶನಿವಾರ, 3 ಜುಲೈ 2021 (14:51 IST)
ಬೆಂಗಳೂರು: ಪೊಲೀಸ್ ಅಧಿಕಾರಿಗಳ ಮತ್ತು ಸಿಬ್ಬಂದಿ ಗೃಹ ನಿರ್ಮಾಣ ಸಹಕಾರ ಸಂಘದ ಸೈಟ್ ಹಂಚಿಕೆಯಲ್ಲಿ ವಿಳಂಬವಾಗುತ್ತಿದೆ ಹಾಗೂ ವಂಚನೆ ನೆಡೆದಿರುವ ಶಂಕೆ ವ್ಯಕ್ತಪಡಿಸಿ ಡಿಜಿಪಿ ಪ್ರವೀಣ್ ಸೂದ್ ರಿಗೆ ಸಂಘದ ಸದಸ್ಯರು ಪತ್ರ ಬರೆದಿರುವುದು ಇದೀಗ ಬೆಳಕಿಗೆ ಬಂದಿದೆ.
 
ಸಂಘದ ಅಧ್ಯಕ್ಷ ಐಪಿಎಸ್ ಅಧಿಕಾರಿ ಎ.ಎನ್. ಪ್ರಕಾಶ್ ಗೌಡ ಎನ್ನುವವರ ವಿರುದ್ಧ ಪತ್ರ ಬರೆದಿದ್ದು, ಕೂಡಲೇ ಮಧ್ಯಪ್ರವೇಶಿಸಿ ವಂಚನೆಗೊಳಗಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನ್ಯಾಯ ಒದಗಿಸಬೇಕೆಂದು ಉಲ್ಲೇಖಿಸಿದ್ದಾರೆ.
 
2014ರಲ್ಲಿ ಪೊಲೀಸ್ ಅಧಿಕಾರಿಗಳ ಮತ್ತು ಸಿಬ್ಬಂದಿ ಗೃಹ ನಿರ್ಮಾಣ ಸಹಕಾರ ಸಂಘ ಸ್ಥಾಪಿಸಲಾಗಿತ್ತು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೈಟ್‌ಗಳನ್ನು ಅಭಿವೃದ್ಧಿಪಡಿಸಿ ಸದಸ್ಯರಿಗೆ ಜೇಷ್ಠತೆ ಆಧಾರದ ಮೇಲೆ ನಿವೇಶನ ಹಂಚಿಕೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದರು. 1,500 ರೂ. ಪಾವತಿ ಮಾಡಿ ಸದಸ್ಯತ್ವ ಶುಲ್ಕ ನೀಡಲಾಗಿತ್ತು.  ನೆಲಮಂಗಲದ ಮಲ್ಲರ ಬಾಣವಾಡಿ ಗ್ರಾಮದಲ್ಲಿ ಜಮೀನು ಖರೀದಿಸಲಾಗಿತ್ತು. ಚದರಡಿಗೆ 666 ರೂ ಪಾವತಿ ಮಾಡಿದರೆ  ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿಸಲಾಗಿತ್ತು ಎಂದು ಪತ್ರದಲ್ಲಿ ವಿವರಿಸಿದ್ದಾರೆ.
 
2016ರಲ್ಲಿ ಪೂರ್ಣ ಹಣ ಪಾವತಿ ಮಾಡಿದರೆ ಮೊದಲು ಜೇಷ್ಠತೆ ಆಧಾರದ ನಿವೃತ್ತಿ ಅಂಚಿಗೆ ಬಂದಿದ್ದವರಿಗೆ ಮೊದಲು ಸೈಟ್ ಕೊಡುವುದಾಗಿ ಹೇಳಿದಾಗ ಸಾವಿರಾರು ಪೊಲೀಸರು ಹಣ ಹೂಡಿಕೆ ಮಾಡಿದ್ದರು. 2019-20ರ  ವಾರ್ಷಿಕ ಸಭೆಯಲ್ಲಿ ಕೇವಲ 200 ಸದಸ್ಯರಿಗೆ ತಾತ್ಕಾಲಿಕ ಹಂಚಿಕೆ ಪತ್ರ ನೀಡಿದ್ದರು. ಬಳಿಕ ಇಲ್ಲಿಯವರೆಗೂ ಸೈಟ್ ಹಂಚಿಕೆಯಾಗಿಲ್ಲ. ಒಂದಲ್ಲ ಒಂದು ಕಾರಣ ಹೇಳಿ ಮುಂದೂಡುತ್ತಿದ್ದಾರೆ. 2020-21ನೇ ಸಾಲಿನ ವಾರ್ಷಿಕ ಸಭೆಯಲ್ಲಿ  1 ಸಾವಿರ ಸದಸ್ಯರಿಗೆ ಸೈಟ್ ಹಂಚಿಕೆ ಮಾಡುವುದಾಗಿ ಅಧ್ಯಕ್ಷರು ಹೇಳಿದ್ದರು ಎಂದು ಅಳಲು ತೋಡಿಕೊಂಡಿದ್ದಾರೆ.
 
ಈವರೆಗೂ ನೋಂದಣಿ ಮಾಡಿಕೊಟ್ಟಿಲ್ಲ. ಈ ಬಗ್ಗೆ ಕೇಳಲು ಹೋದರೆ ಕಾಯಲು ಆಗದಿದ್ದಲ್ಲಿ ನೀವು ಕಟ್ಟಿರುವ ಹಣವನ್ನು ವಾಪಸ್ ದಲ್ಲಿ ಪಡೆದುಕೊಂಡು ಹೋಗಿ ಎಂದು ಬೇಜವಾಬ್ದಾರಿಯ ಹೇಳಿಕೆ ಕೊಡುತ್ತಿದ್ದಾರೆ ಎಂದು ನೊಂದ ಪೊಲೀಸ್ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಪತ್ರದಲ್ಲಿ ಆರೋಪಿಸಿದ್ದಾರೆ.
 
ರಾಜಧಾನಿಯಲ್ಲಿ ಸೈಟ್ ಹೊಂದುವ ಸಲುವಾಗಿ ಪೊಲೀಸ್ ಇಲಾಖೆಯಲ್ಲಿ ಹಗಲುರಾತ್ರಿ ಕರ್ತವ್ಯ ನಿರ್ವಹಿಸಿ ಸಂಪಾದನೆ ಮಾಡಿ, ಸಾಲ ಮಾಡಿ ಲಕ್ಷಾಂತರ ರೂ ಗಳನ್ನು ಪೊಲೀಸ್ ಅಧಿಕಾರಿಗಳ ಮತ್ತು ಸಿಬ್ಬಂದಿ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಪಾವತಿ ಮಾಡಿದ್ದೇವೆ. ಕೆಲವರು ನಿವೃತ್ತಿ ಹೊಂದಿದ್ದಾರೆ, ಇನ್ನೂ ಹಲವಾರು ನಿವೃತ್ತಿ ಅಂಚಿಗೆ ಬಂದಿದ್ದಾರೆ, ಮೃತ ಪಟ್ಟಿರುವ ಸದಸ್ಯರೂ ಇದ್ದಾರೆ . ಸ್ವಂತ ನಿವೇಶನದಲ್ಲಿ ಮನೆ ಕಟ್ಟಬೇಕೆಂಬ ಆಸೆ ಕಮರಿ ಹೋಗಿದೆ, ನೆಮ್ಮದಿ ಇಲ್ಲದಾಗಿದೆ. ಈ ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಡಿಜಿಪಿಗೆ ನೊಂದ ಸದಸ್ಯರು ಮನವಿ ಮಾಡಿದ್ದೇವೆ ಎಂದು ಕೆಲ ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ.
 
ಪೊಲೀಸ್ ಅಧಿಕಾರಿಗಳ ಮತ್ತು ಸಿಬ್ಬಂದಿ ಗೃಹ ನಿರ್ಮಾಣ ಸಹಕಾರ ಸಂಘದ ಸದಸ್ಯರಿಂದ ಸಂಗ್ರಹಿಸಿದ ಹಣವನ್ನು ಲಾಭ ಮಾಡುವ ಆಸೆಯಿಂದ ರಿಯಲ್‌ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿದ್ದಾರೆ. ತಾಂತ್ರಿಕ ಕಾರಣಕ್ಕೆ ಜಮೀನು ಸಂಘದ ಹೆಸರಿಗೆ ಆಗುತ್ತಿಲ್ಲ. ಹಣವೂ ಕೈ ಸೇರದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ನೇರ ಆರೋಪವನ್ನು ಕೆಲ ಸದಸ್ಯರು ಹೊರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ರಾಜಕಾರಣಕ್ಕೆ ಕುಮಾರಸ್ವಾಮಿ ಎಂಟ್ರಿ, ಸಿಎಂ ಸಿದ್ದರಾಮಯ್ಯ ಏನ್ ಹೇಳಿದ್ರು ಗೊತ್ತಾ

ಆಸಕ್ತಿ ತೋರದವರನ್ನು ಕಿತ್ತು ಹಾಕಲಾಗುವುದು: ಡಿಕೆ ಶಿವಕುಮಾರ್ ಎಚ್ಚರಿಕೆ ಗಂಟೆ ನೀಡಿದ್ಯಾರಿಗೆ

ಕಜಕಿಸ್ತಾನ: ರಸ್ತೆ ಅಪಘಾತದಲ್ಲಿ ಒಬ್ಬ ಭಾರತೀಯ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

ರಾಹುಲ್ ಗಾಂಧಿ ಭೇಟಿ ಬಳಿಕ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಮಹತ್ವದ ಹೇಳಿಕೆ

10 ನಿಮಿಷಗಳ ಡೆಲಿವರಿ ಗಡುವಿಗೆ ಇನ್ಮುಂದೆ ಬ್ರೇಕ್‌, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments