Webdunia - Bharat's app for daily news and videos

Install App

ರೈತನ ಮೇಲೆ ಲಾಠಿ ಚಾರ್ಜ್‌: ಸಿಎಂಗೆ ನಾಡಿನ ರೈತರಿಗಿಂತ ಓಲೈಕೆ ರಾಜಕಾರಣವೇ ಹೆಚ್ಚಾಯ್ತ

Sampriya
ಶುಕ್ರವಾರ, 15 ನವೆಂಬರ್ 2024 (17:36 IST)
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವ ಜಮೀನಿನಲ್ಲಿ ಉಳುಮೆ ಮಾಡಲು ಮುಂದಾಗಿದ್ದ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ತನ್ನ ಓಲೈಕೆ ರಾಜಕಾರಣಕ್ಕೆ ರೈತರನ್ನು ಬಲಿಕೊಡಲು ಮುಂದಾಗಿದೆ ಈ ಕಟುಕ ಕಾಂಗ್ರೆಸ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಸಿಎಂ ಸಿದ್ದರಾಮಯ್ಯನವರೇ, ರೈತರ ಜಮೀನಿನ ಮೇಲೆ ಕಬ್ಜಾ ಮಾಡುವುದೇ ಅಲ್ಲದೆ, ಅವರ ಮೇಲೆ ಲಾಠಿ ಚಾರ್ಜ್ ಮಾಡಿ, ಟ್ರ್ಯಾಕ್ಟರ್ ವಶಕ್ಕೆ ಪಡೆದು ರೈತರ ವಿರುದ್ಧ ದೂರು ದಾಖಲಿಸಿಕೊಂಡಿದ್ದೀರಲ್ಲ, ನಿಮಗೆ ನಾಡಿನ ರೈತರಿಗಿಂತ ಓಲೈಕೆ ರಾಜಕಾರಣವೇ ಹೆಚ್ಚಾಯ್ತ?

ಅನ್ನ ಹಾಕುವ ಕೈಗಳಿಗೆ ಕೋಳ ತೊಡಿಸುವ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದೆ. ಅನ್ನದಾತರ ಶಾಪ ಈ ಸರ್ಕಾರವನ್ನು ಸುಡುವ ದಿನ ದೂರವಿಲ್ಲ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ಮುಂದಿನ ಸುದ್ದಿ
Show comments