ಶಾಶ್ವತ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತ ವಿಧಾನಸೌಧದತ್ತ ಬರುತ್ತಿದ್ದ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವರ ಹಿನ್ನೆಲೆಯಲ್ಲಿ ಇಂದು ವಿಧಾನ ಮಂಡಲದಲ್ಲಿ ಕೋಲಾಹಲ ಉಂಟಾಗುವ ಸಾಧ್ಯತೆ ಇದೆ.
ರೈತರ ಮೇಲೆ ಲಾಠಿ ಚಾರ್ಜ್ ಮಾಡಿರುವ ಬಗ್ಗೆ ವಿವರಣೆ ಕೊಡುವಂತೆ ಪ್ರತಿಪಕ್ಷಗಳು ಉಭಯ ಸದನಗಳಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಗಳು ದಟ್ಟವಾಗಿದೆ.
ಜತೆಗೆ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಬಗ್ಗೆ ಸಹ ಚರ್ಚೆ ನಡೆಯಲಿದೆ.
ಶಾಶ್ವತ ನೀರಿಗಾಗಿ ಹೋರಾಟಕ್ಕಿಳಿದ ರೈತರ ಮೇಲೆ ನಿನ್ನೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದನ್ನು ಖಂಡಿಸಿ ಇಂದು ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆ ಸಂಪೂರ್ಣ ಬಂದ್ಗೆ ಕರೆ ನೀಡಲಾಗಿದೆ.
ಚಿಕ್ಕಬಳ್ಳಾಪುರ ಹಾಗೂ ಕೋಲಾರದಿಂದ ಸಾವಿರಾರು ರೈತರು ಬೃಹತ್ ಟ್ರ್ಯಾಕ್ಟರ್ ಮೆರವಣಿಗೆಯೊಂದಿಗೆ ವಿಧಾಸೌಧದತ್ತ ಬರುತ್ತಿದ್ದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು.