Webdunia - Bharat's app for daily news and videos

Install App

ಜನಾರ್ದನ ರೆಡ್ಡಿ ಪುತ್ರಿಯ ಅದ್ಧೂರಿ ವಿವಾಹ ಸರಿಯಲ್ಲ: ಸಚಿವ ರಮೇಶ್ ಕುಮಾರ್

Webdunia
ಬುಧವಾರ, 16 ನವೆಂಬರ್ 2016 (15:06 IST)
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಪುತ್ರಿಯ ವಿವಾಹವನ್ನು ಇಷ್ಟು ಅದ್ಧೂರಿಯಾಗಿ ಮಾಡುತ್ತಿರುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. 
ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಸಾಕಷ್ಟು ಕಷ್ಟದ ನಂತರ ತಮ್ಮ ಮಗಳ ವಿವಾಹ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡುವುದು ಉತ್ತಮವಲ್ಲ. ಮದುವೆ ಅವರವರ ವೈಯಕ್ತಿಕ ವಿಚಾರ ಎಂದು ಹೇಳಿದರು. 
 
ಶಾಸಕನಾಗಿದ್ದಾಗ ಅದ್ಧೂರಿ ವಿವಾಹ ತಡೆಗೆ ಖಾಸಗಿ ವಿಧೇಯಕ ಮಂಡಿಸಿದ್ದೆ. ಅದ್ಧೂರಿ ವಿವಾಹಗಳನ್ನು ಯಾರು ನಡೆಸಬಾರದು. ಸ್ವಯಂ ನಿಯಂತ್ರಣ ಹಾಕಿಕೊಂಡರೆ ಒಳ್ಳೆಯದು ಎಂದು ತಿಳಿಸಿದರು. 
 
ಬಿಜೆಪಿ ನಾಯಕರು ರೆಡ್ಡಿ ಪುತ್ರಿಯ ಅದ್ಧೂರಿ ವಿವಾಹದಲ್ಲಿ ಭಾಗವಹಿಸಿದ್ದಾರೆ. ಇದು ಅವರವರ ವೈಯಕ್ತಿಕ ವಿಚಾರ. ಇದರ ಬಗ್ಗೆ ಕೇಂದ್ರವೆ ಉತ್ತಮ ನಿರ್ಧಾರ ತೆಗೆದುಕೊಳ್ಳುವುದು ಸರಿಯೆನಿಸುತ್ತಿದೆ ಎಂದು ಬಿಜೆಪಿ ನಾಯಕರನ್ನು ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ಪರೋಕ್ಷವಾಗಿ ಟೀಕಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments