Webdunia - Bharat's app for daily news and videos

Install App

ಜನಾರ್ದನ ರೆಡ್ಡಿ ಪುತ್ರಿಯ ಅದ್ಧೂರಿ ವಿವಾಹ ಸರಿಯಲ್ಲ: ಸಚಿವ ರಮೇಶ್ ಕುಮಾರ್

Webdunia
ಬುಧವಾರ, 16 ನವೆಂಬರ್ 2016 (15:06 IST)
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಪುತ್ರಿಯ ವಿವಾಹವನ್ನು ಇಷ್ಟು ಅದ್ಧೂರಿಯಾಗಿ ಮಾಡುತ್ತಿರುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. 
ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಸಾಕಷ್ಟು ಕಷ್ಟದ ನಂತರ ತಮ್ಮ ಮಗಳ ವಿವಾಹ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡುವುದು ಉತ್ತಮವಲ್ಲ. ಮದುವೆ ಅವರವರ ವೈಯಕ್ತಿಕ ವಿಚಾರ ಎಂದು ಹೇಳಿದರು. 
 
ಶಾಸಕನಾಗಿದ್ದಾಗ ಅದ್ಧೂರಿ ವಿವಾಹ ತಡೆಗೆ ಖಾಸಗಿ ವಿಧೇಯಕ ಮಂಡಿಸಿದ್ದೆ. ಅದ್ಧೂರಿ ವಿವಾಹಗಳನ್ನು ಯಾರು ನಡೆಸಬಾರದು. ಸ್ವಯಂ ನಿಯಂತ್ರಣ ಹಾಕಿಕೊಂಡರೆ ಒಳ್ಳೆಯದು ಎಂದು ತಿಳಿಸಿದರು. 
 
ಬಿಜೆಪಿ ನಾಯಕರು ರೆಡ್ಡಿ ಪುತ್ರಿಯ ಅದ್ಧೂರಿ ವಿವಾಹದಲ್ಲಿ ಭಾಗವಹಿಸಿದ್ದಾರೆ. ಇದು ಅವರವರ ವೈಯಕ್ತಿಕ ವಿಚಾರ. ಇದರ ಬಗ್ಗೆ ಕೇಂದ್ರವೆ ಉತ್ತಮ ನಿರ್ಧಾರ ತೆಗೆದುಕೊಳ್ಳುವುದು ಸರಿಯೆನಿಸುತ್ತಿದೆ ಎಂದು ಬಿಜೆಪಿ ನಾಯಕರನ್ನು ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ಪರೋಕ್ಷವಾಗಿ ಟೀಕಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮೋದಿ ತಾಯಿಗೆ ಅವಮಾನ, ಚುನಾವಣೆಯಲ್ಲಿ ಪ್ರತ್ಯುತ್ತರ ಎಂದ ಬಿಹಾರ ಮಹಿಳೆಯರು

ಬಾನು ಮುಪ್ತಾಕ್‌ ಕುಂಕುಮ ಹಚ್ಚಲಿ ಎನ್ನುವುದು ತರವಲ್ಲ: ಸಿಎಂ ಸಿದ್ದರಾಮಯ್ಯ

ಆಕೆ ಈಗಿಲ್ಲ, ಆದರೂ ಗುರಿಯಾಗಿದ್ದಾಳೆ: ತಾಯಿ ಬಗೆಗಿನ ನಿಂದನೆಗೆ ಮೋದಿ ಭಾವುಕ

ಮುಂದಿನ ಸುದ್ದಿ
Show comments