Webdunia - Bharat's app for daily news and videos

Install App

ಕೋಟಿ ರೂಪಾಯಿಗಳ ದಿನಸಿ ವಿತರಿಸುತ್ತಿರುವ ಶಾಸಕ

Webdunia
ಶುಕ್ರವಾರ, 24 ಏಪ್ರಿಲ್ 2020 (18:52 IST)
ಲಾಕ್ ಡೌನ್ ನಡುವೆ ಸ್ವಂತ ಖರ್ಚಿನಲ್ಲಿ ಒಂದು ಕೋಟಿ ರೂಪಾಯಿ ಮೌಲ್ಯದ ದಿನಸಿಯನ್ನು ಶಾಸಕರೊಬ್ಬರು ವಿತರಣೆ ಮಾಡುತ್ತಿದ್ದಾರೆ.  

ಮಹಾಮಾರಿ ಕೋವಿಡ್ -19  ದಿನಗೂಲಿ ಮಾಡಿ ಜೀವನ ಸಾಗಿಸುವ ಬಡವರ ಹೊಟ್ಟೆಯ ಮೇಲೆ ಬರೆ ಎಳೆದಿದೆ. ಅಂತಹವರಿಗೆ ಸ್ವಂತ ಹಣ ಒಂದು ಕೋಟಿ ರೂಪಾಯಿ ಖರ್ಚಿನಲ್ಲಿ ದಿನಸಿ ವಸ್ತುಗಳನ್ನು ವಿತರಣೆ ಮಾಡುತ್ತಿದ್ದೇನೆ ಎಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಶಾಸಕ ಎ. ಎಸ್.ಪಾಟೀಲ್. ನಡಹಳ್ಳಿ ಹೇಳಿದ್ದಾರೆ.

ಮುದ್ದೇಬಿಹಾಳ, ನಾಲತ ವಾಡ, ತಾಳಿಕೋಟೆಯ ನಾನಾ ಭಾಗದಲ್ಲಿ ಸಕ್ಕರೆ, ರವೆ, ಖಾರಾ ಮಸಾಲಾ ಪದಾರ್ಥ ಚಹಾದ ಪುಡಿ, ಈರುಳ್ಳಿ, ತೊಗರಿ, ಆಲೂಗಡ್ಡೆ ಸೇರಿದಂತೆ ಇನ್ನಿತರೆ ಅಗತ್ಯ ಆಹಾರ ಸಾಮಗ್ರಿಗಳನ್ನು ಬಡವರಿಗೆ ವಿತರಣೆ ಮಾಡುತ್ತಿದ್ದೇನೆ.  ವೈಯಕ್ತಿಕ ಸ್ವಚ್ಛತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಹೇಳಲಾಗುತ್ತಿದೆ ಎಂದಿದ್ದಾರೆ.  

ಕಡು ಬಡತನದಲ್ಲಿ ಹುಟ್ಟಿ ಬೆಳೆದ ನನಗೆ ಜನರ ಸಂಕಟಕ್ಕೆ ಮಿಡಿಯುವ ಗುಣವನ್ನು ತುಮಕೂರು ಸಿದ್ದಗಂಗಾ ಮಠದ ಸಂಸ್ಕೃತಿ ನನಗೆ ಕಲಿಸಿದೆ ಎಂದು ಶಾಸಕರು ತಿಳಿಸಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments