Webdunia - Bharat's app for daily news and videos

Install App

ಪೊಲೀಸ್ ದೌರ್ಜನ್ಯ ಖಂಡಿಸಿ ವಕೀಲರ ಪ್ರತಿಭಟನೆ

Webdunia
ಮಂಗಳವಾರ, 12 ಫೆಬ್ರವರಿ 2019 (20:10 IST)
ವಕೀಲರೊಬ್ಬರ ಮೇಲೆ ಹಲ್ಲೆ ಮಾಡಿರುವ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ನೂರಾರು ವಕೀಲರು ಪ್ರತಿಭಟಿಸಿದ್ದಾರೆ.

ಚಾಮರಾಜನಗರದ ಜಿಲ್ಲಾ ನ್ಯಾಯಾಲಯದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಜಿಲ್ಲಾ ವಕೀಲರ ಸಂಘದ ಸದಸ್ಯರು, ತಮ್ಮ ಸಹೋದ್ಯೋಗಿ ವಕೀಲ ರವಿ ಎಂಬುವರ ಮೇಲೆ ಕ್ಷುಲ್ಲಕ ಕಾರಣಕ್ಕೆ ಸುಳ್ಳು ದೂರು ದಾಖಲಿಸಿದ್ದಾರೆ. ಅಲ್ಲದೇ ಪ್ರಕರಣ ದಾಖಲಿಸದೇ, ಯಾವುದೇ ಸರ್ಚ್ ವಾರೆಂಟ್ ಇಲ್ಲದೇ ಮನೆಗೆ ನುಗ್ಗಿ, ವಕೀಲನ ಮೇಲೆ ಗುಂಡ್ಲುಪೇಟೆ ಇನ್ಸ್‍ಪೆಕ್ಟರ್ ಬಾಲಕೃಷ್ಣ ಹಲ್ಲೆ ನಡೆಸಿದ್ದು, ಠಾಣೆಯಲ್ಲೂ ಸಹ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿದ್ದಾರೆ.

ಇದನ್ನು ಖಂಡಿಸಿ ಒಂದು ವಾರದಿಂದಲೂ ಕಲಾಪಗಳಿಂದ ದೂರ ಉಳಿದು ಗುಂಡ್ಲುಪೇಟೆ ಠಾಣೆಯ ಪಿಎಸ್‍ಐ ಮತ್ತು ಸಿಪಿಐ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರೂ ಸಹ ಸೌಜನ್ಯಕ್ಕೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ನಮ್ಮನ್ನ ಮಾತನಾಡಿಸಿಲ್ಲ ಎಂದು ದೂರಿದರು. ಹಲ್ಲೆ ಮಾಡಿರುವ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸದಿದ್ರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ವಕೀಲರ ಸಂಘ ಎಚ್ಚರಿಸಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments