Webdunia - Bharat's app for daily news and videos

Install App

ನನಗೆ ವಿಷ ಕುಡಿಯಲೂ ಹಣವಿಲ್ಲ ಎಂದಿದ್ದರು ಯಡಿಯೂರಪ್ಪ: ಲಕ್ಷ್ಮಣ್ ಸವದಿ

Krishnaveni K
ಸೋಮವಾರ, 25 ಮಾರ್ಚ್ 2024 (16:43 IST)
ಬೆಂಗಳೂರು: ಕಳೆದ ವಿನಧಾನಸಭೆ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್ ಸೇರಿದ್ದ ಶಾಸಕ ಲಕ್ಷ್ಮಣ್ ಸವದಿ ಯಡಿಯೂರಪ್ಪ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಲಕ್ಷ್ಮಣ್ ಸವದಿ ಉಪ ಮುಖ್ಯಮಂತ್ರಿಯಾಗಿದ್ದರು. ಇದೀಗ ಬೆಳಗಾವಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಲಕ್ಷ್ಮಣ್ ಸವದಿ ಅಂದಿನ ಸರ್ಕಾರದ ಹಣಕಾಸಿನ ಪರಿಸ್ಥಿತಿ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.

ಯಡಿಯೂರಪ್ಪ ಸಿಎಂ ಆಗಿದ್ದಾಗ ನನಗೇ ವಿಷ ಕುಡಿಯಲೂ ಹಣವಿಲ್ಲ. ನಿನಗೆ ಎಲ್ಲಿಂದ ತರಲಿ ಎನ್ನುತ್ತಿದ್ದರು. ಆದರೆ ಈಗ ಸಿದ್ದರಾಮಯ್ಯ ಸರ್ಕಾರ ಚುನಾವಣೆ ಸಮಯದಲ್ಲಿ ಹೇಳಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕಾಗಿ ಬಜೆಟ್ ನಲ್ಲಿ 55 ಸಾವಿರ ಕೋಟಿ ರೂ. ಮೀಸಲಿಟ್ಟಿದೆ ಎಂದಿದ್ದಾರೆ.

ಬಿಎಸ್ ಯಡಿಯೂರಪ್ಪ ಮತ್ತು ಕೆಎಸ್ ಈಶ್ವರಪ್ಪ ಸೇರಿಕೊಂಡು ರಾಜ್ಯದಲ್ಲಿ ಬಿಜೆಪಿ ಬಪಡಿಸಿದರು. ಆದರೆ ಬಳಿಕ ಈಗ ಕೆಎಸ್ ಈಶ್ವರಪ್ಪ ಪುತ್ರನಿಗೇ ಟಿಕೆಟ್ ಕೊಡಲಿಲ್ಲ. ಜಗದೀಶ್ ಶೆಟ್ಟರ್  ಗೆ ಮೊದಲು ಬಾಲ ಕಟ್ ಮಾಡಿದರು. ಈಗ ಬಾಲ ಚಿಗುರುತ್ತಿದೆ ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments