ಸಿಟಿ ರವಿಗೆ ಕೊಲೆಗಡುಕ ಅಂದಿದ್ದು ನಿಜ ಎಂದು ಒಪ್ಪಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ್

Krishnaveni K
ಶುಕ್ರವಾರ, 20 ಡಿಸೆಂಬರ್ 2024 (14:00 IST)
Photo Credit: X
ಬೆಳಗಾವಿ: ನಿನ್ನೆ ಸದನದಲ್ಲಿ ನಡೆದ ಗಲಾಟೆ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಟಿ ರವಿಗೆ ನಾನು ಕೊಲೆಗಡುಕ ಎಂದಿರುವುದು ನಿಜ. ಅದಕ್ಕೆ ಅವರು ಅಶ್ಲೀಲ ಪದ ಬಳಸಿದರು. ಅದರಿಂದ ನನಗೆ ನೋವಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ‘ಅಂಬೇಡ್ಕರ್ ಗೆ ಅವಮಾನವಾಗುವಂತಹ ಪದವನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದರು. ಅದರ ವಿರುದ್ಧ ನಾವು ಪ್ರತಿಭಟನೆ ನಡೆಸುತ್ತಿದ್ದೆವು. ಯಾಕೆಂದರೆ ಅಂಬೇಡ್ಕರ್ ಅವರಿಂದಲೇ ನಾವು ನೀವು ಎಂಎಲ್ಎ, ಎಂಪಿಗಳಾಗಿರುವುದು.

ಧರಣಿ ಮುಗಿಸಿ ನಮ್ಮ ಸ್ಥಾನದಲ್ಲಿ ಕುಳಿತಿದ್ದೆವು. ಆಗ ಸಿಟಿ ರವಿಯವರು ಇದ್ದಕ್ಕಿದ್ದಂತೆ ನಮ್ಮ ನಾಯಕ ರಾಹುಲ್ ಗಾಂಧಿಯನ್ನು ಡ್ರಗ್ ಅಡಿಕ್ಟ್ ಎಂದರು. ಇದು ನಮಗೆ ಸಿಟ್ಟು ತರಿಸಿತು. ಆಗ ನಾನು ತಾವು ಕೂಡಾ ಆಕ್ಸಿಡೆಂಟ್ ಮಾಡಿದ್ದೀರಿ, ನೀವು ಕೊಲೆಗಾರರಾಗ್ತೀರಿ ಎಂದೆ. ಆಗ ಅವರು ನನಗೆ ಹೇಳಬಾರದ ಪದವನ್ನು ಹಲವು ಬಾರಿ ಹೇಳಿದರು’ ಎಂದು ಭಾವುಕರಾಗಿ ಹೇಳಿದ್ದಾರೆ.

‘ಆದರೆ ಇದಕ್ಕೆಲ್ಲಾ ನಾನು ಹೆದರಲ್ಲ. ನಾನೊಬ್ಬ ಮಹಿಳೆ, ತಾಯಿ, ಸಹೋದರಿ, ಅತ್ತೆ. ನನಗೆ ಆ ಥರಾ ಹೇಳಿದ್ದಕ್ಕೆ ನೋವಾಗಿದೆ. ಇಲ್ಲಿಯವರೆಗೂ ಒಂದು ಇರುವೆಗೂ ಕಾಟ ಕೊಟ್ಟಿಲ್ಲ. ಕೆಟ್ಟವರನ್ನು ಕಂಡರೆ ದೂರ ಇರೋಳು. ಆ ವೇದಿಕೆಯಲ್ಲಿ ಎಲ್ಲರೂ ದೃತರಾಷ್ಟ್ರರಾದರು. ನನ್ನ ಪಕ್ಷದವರು ಮಾತ್ರ ಬೆನ್ನಿಗೆ ನಿಂತರು’ ಎಂದಿದ್ದಾರೆ.

ಇನ್ನು ಸಿಟಿ ರವಿಗೆ ತಾನು ಕೊಲೆಗಡುಕ ಎಂದಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಆ ಮಾತಿಗೆ ನಾನು ಬದ್ಧಳಾಗಿದ್ದೇನೆ. ರಾಹುಲ್ ಗಾಂಧಿಯನ್ನು ವಿನಾಕಾರಣ ಡ್ರಗ್ ಅಡಿಕ್ಟ್ ಎಂದಿದ್ದು ನನಗೆ ಕೋಪ ತಂದಿತ್ತು. ರಾಜ್ಯ ಸಭೆ ಎಂದರೆ ಬುದ್ಧಿವಂತರ ಸದನ ಎನ್ನುತ್ತಾರೆ. ಆದರೆ ನಿನ್ನೆ ಆಗಿದ್ದು ಏನು? ಒಬ್ಬ ಹೆಣ್ಣಿಗೆ ಅವಮಾನವಾಗುವಂತಹ ಪದಗಳನ್ನು ಸಹಿಸಲು ಹೇಗೆ ಸಾಧ್ಯ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments