Select Your Language

Notifications

webdunia
webdunia
webdunia
webdunia

ಲಕ್ಷ್ಮಿ ಹೆಬ್ಬಾಳ್ಕರ್, ಲಕ್ಕಣ್ಣ ನಡುವೆ ಏಕವಚನದಲ್ಲಿಯೇ ಮಾತಿನ ಚಕಮಕಿ

ಲಕ್ಷ್ಮಿ ಹೆಬ್ಬಾಳ್ಕರ್, ಲಕ್ಕಣ್ಣ ನಡುವೆ ಏಕವಚನದಲ್ಲಿಯೇ ಮಾತಿನ ಚಕಮಕಿ
ಬೆಂಗಳೂರು , ಬುಧವಾರ, 10 ಮೇ 2017 (14:03 IST)
ಕೆಪಿಸಿಸಿ ಕಚೇರಿಯ ಆವರಣದಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ವಿಭಾಗದ ಅಧ್ಯಕ್ಷ ಲಕ್ಕಣ್ಣ ನಡುವೆ ಏಕವಚನದಲ್ಲಿಯೇ ಮಾತಿನ ಚಕಮಕಿ ನಡೆದಿದೆ.
 
ಬೆಂಗಳೂರಿನ ಕೆಪಿಸಿಸಿ ಕಚೇರಿಯ ಮೊದಲ ಮಹಡಿಯ ಆವರಣದಲ್ಲಿಯೇ ಹೆಬ್ಬಾಳ್ಕರ್ ಮತ್ತು ಲಕ್ಕಣ್ಣ ನಡುವೆ ಏಕವಚನದಲ್ಲಿಯೇ ಮಾತಿನ ಚಕಮಕಿ ನಡೆದು ಕೆಲ ಕಾಲ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಮೂಲಗಳು ತಿಳಿಸಿವೆ.
 
ಜಿಲ್ಲಾ ಕಾಂಗ್ರೆಸ್ ಘಟಕದಲ್ಲಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಉಸ್ತುವಾರಿ ಹೊತ್ತಿರುವ ಕೆ.ಸಿ.ವೇಣುಗೋಪಾಲ್ ಅವರಿಗೆ ಲಿಖಿತ ದೂರು ನೀಡಲು ಲಕ್ಕಣ್ಣ ಆಗಮಿಸಿದಾಗ, ಹೆಬ್ಬಾಳ್ಕರ್ ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಹೆಬ್ಬಾಳ್ಕರ್ ಮತ್ತು ಲಕ್ಕಣ್ಣ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸಚಿವ ಎಚ್.ವಿಶ್ವನಾಥ್ ಜೆಡಿಎಸ್‌ಗೆ ಬಂದಲ್ಲಿ ಸ್ವಾಗತ: ಕುಮಾರಸ್ವಾಮಿ