Select Your Language

Notifications

webdunia
webdunia
webdunia
webdunia

ಭಿಕ್ಷೆ ಬೇಡಿ ಕೇಂದ್ರ ಸರ್ಕಾರದ ಕಣ್ಣು ತೆರೆಸುತ್ತೇನೆ.- ಸಂತ್ರಸ್ತರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಬೆಳಗಾವಿ
ಬೆಳಗಾವಿ , ಗುರುವಾರ, 29 ಆಗಸ್ಟ್ 2019 (10:45 IST)
ಬೆಳಗಾವಿ : ರಮೇಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದಲ್ಲಿ ಸಂತ್ರಸ್ತರ ನೆರವಿಗೆ ನಿಂತು  ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ದರ್ಬಾರ್ ನಡೆಸದ್ದಾರೆ ಎನ್ನಲಾಗಿದೆ.




ಸಂತ್ರಸ್ತರ ಜತೆ ಚರ್ಚೆ ನಡೆಸುವ ವೇಳೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಬೆಂಗಳೂರಿನಲ್ಲಿ ಭಿಕ್ಷೆ ಬೇಡಿ ಕೇಂದ್ರ ಸರ್ಕಾರದ ಕಣ್ಣು ತೆರೆಸ್ತೇನೆ. ಕೇಂದ್ರದಿಂದ ಒಂದು ರೂಪಾಯಿಯೂ ನೆರೆ ಪರಿಹಾರ ಸಿಕ್ಕಿಲ್ಲ. ಬರಗಾಲ ಹಿನ್ನಲೆ ಕುಮಾರಸ್ವಾಮಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ರು. ಆ ವೇಳೆ ಕೇಂದ್ರ ಸರ್ಕಾರ ಪರಿಹಾರ ಹಣ ಬಿಡುಗಡೆ ಮಾಡಿದೆ. ಆ ಹಣದಿಂದ ನಿಮಗೆ 10 ಸಾವಿರ ಕೊಟ್ಟು ದಿಕ್ಕು ತಪ್ಪಿಸ್ತಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ನಾನು ಪ್ರತಿಭಟನೆ ಮಾಡ್ತೇನೆ ಎಂದು ಹೇಳಿದ್ದಾರೆ.


ಲಕ್ಷ್ಮೀ ಹೆಬ್ಬಾಳ್ಕರ್ ಮಾತಿಗೆ ಸಂತ್ರಸ್ತರು ನಗಾಡಿದ ಹಿನ್ನಲೆ ಮತ್ತೊಮ್ಮೆ ದೇವರ ಮೇಲೆ ಆಣೆ ಮಾಡಿ ಹೇಳಿಕೆ ನೀಡಿದ್ದಾರೆ. ಅಲ್ಲದೇ ಸಾಲ ಮರುಪಾವತಿ ಮಾಡಲು ಹೇಳಿದರೆ ವಿಷ ಕುಡಿಯುವಂತೆ ಬೆದರಿಕೆ ಹಾಕಿ ಎಂದು ಸಂತ್ರಸ್ತರಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಭಾರತ – ಪಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ; ಗಡಿಯಲ್ಲಿ ಕಟ್ಟೆಚ್ಚರ