Webdunia - Bharat's app for daily news and videos

Install App

48 ಗಂಟೆ ಮೇಡಂ ನೋಡಕ್ಕೆ ಯಾರೂ ಬರಬೇಡ್ರೀ ಎಂದು ಮನವಿ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ವೈದ್ಯರು

Krishnaveni K
ಶುಕ್ರವಾರ, 17 ಜನವರಿ 2025 (12:49 IST)
ಬೆಳಗಾವಿ: ಇತ್ತೀಚೆಗೆ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರನ್ನು ಭೇಟಿ ಮಾಡಲು ಮುಂದಿನ 48 ಗಂಟೆ ಯಾರೂ ಬರಬೇಡ್ರೀ ಎಂದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ಮನವಿ ಮಾಡಿದ್ದಾರೆ.

ಸಂಕ್ರಾಂತಿ ದಿನ ತಮ್ಮ ಬೆಳಗಾವಿ ನಿವಾಸಕ್ಕೆ ತೆರಳುತ್ತಿದ್ದಾಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮರಕ್ಕೆ ಢಿಕ್ಕಿ ಹೊಡೆದು ಅಪಘಾತಕ್ಕೀಡಾಗಿತ್ತು. ಟ್ಯಾಂಕರ್ ನಿಂದ ತಪ್ಪಿಸಲು ಹೋಗಿ ದುರ್ಘಟನೆಯಾಗಿತ್ತು ಎಂದು ಬಳಿಕ ತನಿಖೆಯಿಂದ ತಿಳಿದುಬಂದಿತ್ತು.

ಘಟನೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು, ತಲೆಗೆ ಪೆಟ್ಟಾಗಿತ್ತು. ಹೀಗಾಗಿ ಅವರಿಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಲೂ ಅವರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದಿದೆ.

ಅವರ ಆರೋಗ್ಯದ ಬಗ್ಗೆ ಇಂದು ವೈದ್ಯರು ಮಾಹಿತಿ ನೀಡಿದ್ದಾರೆ. ‘ಮೇಡಂರವರು ತುಂಬಾ ಬೇಗ ಚೇತರಿಸಿಕೊಳ್ಳುತ್ತಿದ್ದಾರೆ. ತಲೆ ಗಾಯ ವಾಸಿಯಾಗಿದೆ. ಆದರೆ ತಲೆಗೆ ಪೆಟ್ಟಾಗಿದ್ದರಿಂದ ಅವರಿಗೆ ವಿಶ್ರಾಂತಿಯ ಅಗತ್ಯವಿದೆ. ಆಗಾಗ ಅವರನ್ನು ನೋಡಲು ಅನೇಕರು ಬರುತ್ತಲೇ ಇರುತ್ತಾರೆ. ಹೀಗಾಗಿ ಅವರಿಗೆ ಸೂಕ್ತ ವಿಶ್ರಾಂತಿ ಸಿಗುತ್ತಿಲ್ಲ. ಇದರಿಂದ ಸ್ವಲ್ಪ ತಲೆ ಚಕ್ಕರ್ ಬಂದಂತೆ ಅನಿಸುತ್ತಿದೆ ಎಂದಿದ್ದಾರೆ.

ಹೀಗಾಗಿ ನಾವು ಮಾಧ್ಯಮಗಳ ಮೂಲಕ ಎಲ್ಲರಿಗೂ ಮನವಿ ಮಾಡುತ್ತಿದ್ದೇವೆ. ದಯವಿಟ್ಟು ಯಾರೂ ಅವರನ್ನು ಮುಂದಿನ 48 ಗಂಟೆ ಕಾಲ ಯಾರೂ ನೋಡಲು ಬರಬೇಡಿ. ಅವರು ಈ ಸಂದರ್ಭದಲ್ಲಿ ಸಂಪೂರ್ಣ ವಿಶ್ರಾಂತಿ ತೆಗೆದುಕೊಂಡು ಸುಧಾರಿಸಿದರೆ ಇನ್ನು ಎರಡು ದಿನದಲ್ಲಿ ಡಿಸ್ಚಾರ್ಜ್ ಆಗಿ ಹೋಗಬಹುದು. ಸದ್ಯಕ್ಕೆ ಅವರು ಆರಾಮವಾಗಿದ್ದಾರೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Baloochistan Army blast video: ಬಲೂಚಿಸ್ತಾನ ದಾಳಿಗೆ ಛಿದ್ರ ಛಿದ್ರವಾಗಿ ಬಿತ್ತು 14 ಪಾಕಿಸ್ತಾನ ಸೈನಿಕರ ದೇಹ

Pakistan PM Sharif: ಪ್ರತಿ ರಕ್ತದ ಹನಿಗೂ ನಾವು ಸೇಡು ತಿರಿಸಿಕೊಳ್ತೇವೆ: ಪಾಕಿಸ್ತಾನದ ಪ್ರಧಾನಿ ಶೆಹಬಾಜ್

Lahore blast video: ಪಾಕಿಸ್ತಾನದ ಲಾಹೋರ್ ನಲ್ಲಿ ಪ್ರಬಲ ಸ್ಪೋಟ

Pakistan ಗೊತ್ತು ಗುರಿಯಿಲ್ಲದ ಗುಂಡಿನ ದಾಳಿಗೆ ಭಾರತೀಯ ಯೋಧ ಹುತಾತ್ಮ

Karnataka Weather: ಮುಂಗಾರು ಮಳೆಗಾಗಿ ಕಾಯುತ್ತಿದ್ದವರಿಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments