Webdunia - Bharat's app for daily news and videos

Install App

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಮ್ ಬ್ಯಾಕ್: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್

Krishnaveni K
ಶುಕ್ರವಾರ, 14 ಫೆಬ್ರವರಿ 2025 (14:32 IST)
ಬೆಂಗಳೂರು: ಅಪಘಾತದಲ್ಲಿ ಪೆಟ್ಟು ಮಾಡಿಕೊಂಡಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚೇತರಿಸಿಕೊಂಡು ಮತ್ತೆ ತಮ್ಮ ದೈನಂದಿನ ಕೆಲಸ ಕಾರ್ಯಕ್ಕೆ ಮರಳಿದ್ದಾರೆ. ಇದರ ನಡುವೆಯೇ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಸಂಕ್ರಾಂತಿ ದಿನ ಬೆಳಗಾವಿಯಲ್ಲಿ ರಸ್ತೆ ಅಪಘಾತಕ್ಕೀಡಾಗಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಕೆಲವು ದಿನ ಆಸ್ಪತ್ರೆಯಲ್ಲಿದ್ದರು. ಅದಾದ ಬಳಿಕ ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿಯಲ್ಲಿದ್ದರು. ಇದೀಗ ಮತ್ತೆ ಫೀಲ್ಡಿಗಿಳಿದಿದ್ದಾರೆ.

ಇನ್ನೀಗ ಜನರನ್ನು ಭೇಟಿ ಮಾಡುವ ಕಾರ್ಯಕ್ರಮ ಶುರು ಮಾಡುವುದಾಗಿ ಹೇಳಿರುವ ಅವರು ತಮ್ಮ ಇಲಾಖೆಯ ನೆನೆಗುದಿಗೆ ಬಿದ್ದಿರುವ ಕಾರ್ಯಕ್ರಮಗಳಿಗೆ ಮರು ಚಾಲನೆ ನೀಡಲು ಮುಂದಾಗಿದ್ದಾರೆ. ವಿಶೇಷವಾಗಿ ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ ಎಂದು ಮಹಿಳೆಯರು ಆಕ್ರೋಶಗೊಂಡಿದ್ದಾರೆ.

ಇದೀಗ ಸಚಿವರು ಗೃಹಲಕ್ಷ್ಮಿ ಹಣ ಜಮೆ ಬಗ್ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಾಲೂಕು ಪಂಚಾಯತಿ ಮುಖಾಂತರ ಹೊಸ ವಿಧಾನದಲ್ಲಿ ಗೃಹಲಕ್ಷ್ಮಿ ಹಣ ಹಾಕಲು ಶುರು ಮಾಡಿದ್ದರಿಂದ ಕೊಂಚ ನಿಧಾನವಾಗಿದೆ. ಇನ್ನೀಗ ಹಳೆಯ ವಿಧಾನದಲ್ಲೇ ಪಾವತಿ ಮಾಡುತ್ತೇವೆ. ಈಗಾಗಲೇ ಕೆಲವು ಕಡೆ ಹಾಕಿದ್ದೇವೆ. ಸದ್ಯದಲ್ಲೇ ಎಲ್ಲಾ ಕಡೆ ಆಗುತ್ತದೆ. ಮುಂದಿನ ತಿಂಗಳಿನಿಂದ ಎಂದಿನಂತೆ ಹಣ ಜಮೆ ಆಗಲಿದೆ ಎಂದು ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments