ಲಕ್ಷ್ಮೀ ಹೆಬ್ಬಾಳ್ಕರ್ ಗೆ ಮೊದಲೇ ನೀಡಲಾಗಿತ್ತು ಅಪಘಾತದ ಮುನ್ಸೂಚನೆ

Krishnaveni K
ಮಂಗಳವಾರ, 14 ಜನವರಿ 2025 (16:53 IST)
ಬೆಳಗಾವಿ: ಇಂದು ಮುಂಜಾನೆ ಬೆಳಗಾವಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಾಯಗೊಂಡಿದ್ದಾರೆ. ಸಚಿವೆಗೆ ಈ ಅಪಘಾತದ ಬಗ್ಗೆ ಮೊದಲೇ ಮುನ್ಸೂಚನೆ ದೊರೆತಿತ್ತು ಎನ್ನಲಾಗಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಸಹೋದರ, ಎಂಎಲ್ ಸಿ ಚನ್ನರಾಜು ಜೊತೆಗೆ ಮನೆ ದೇವರ ಪೂಜೆಗೆ ತೆರಳಲು ಬೆಂಗಳೂರಿನ ನಿವಾಸದಿಂದ ಬೆಳಗಾವಿ ನಿವಾಸಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ಇನ್ನೇನು ಮನೆ ತಲುಪಲು 15 ನಿಮಿಷವಿದೆ ಎಂದಾಗ ಅಪಘಾತವಾಗಿದೆ ಎಂದು ಚನ್ನರಾಜು ಮಾಧ್ಯಮಗಳಿಗೆ ಹೇಳಿದ್ದಾರೆ.

ಎರಡು ನಾಯಿಗಳು ಅಡ್ಡಬಂತು. ಅವುಗಳನ್ನು ತಪ್ಪಿಸಲು ಹೋದಾಗ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಹೊಡೆದಿದೆ ಎಂದು ಅವರು ಹೇಳಿದ್ದಾರೆ. ದೇವರ ಆಶೀರ್ವಾದಿಂದ ಅಕ್ಕ ಮತ್ತು ನಾವು ಚೆನ್ನಾಗಿದ್ದೇವೆ. ಶೀಘ್ರದಲ್ಲೇ ಅವರು ಕೆಲಸಕ್ಕೆ ಮರಳುತ್ತಾರೆ ಎಂದು ಚನ್ನರಾಜು ಹೇಳಿದ್ದಾರೆ.

ಅಪಘಾತದ ಬಗ್ಗೆ ಮೊದಲೇ ಭವಿಷ್ಯ ಹೇಳಿದ್ದರು
ಅಪಘಾತದ ಬಗ್ಗೆ ನಮಗೆ ಮೊದಲೇ ಹಿರಿಯರೊಬ್ಬರು ಭವಿಷ್ಯ ಹೇಳಿದ್ದರು ಎಂಬ ವಿಚಾರವನ್ನು ಚನ್ನರಾಜು ಬಿಚ್ಚಿಟ್ಟಿದ್ದಾರೆ. ಸಂಕ್ರಾಂತಿ ಆಜುಬಾಜು ಒಂದು ಅಪಘಾತವಾಗುತ್ತದೆ ಎಂದಿದ್ದರು. ಅದೀಗ ನಿಜವಾಗಿದೆ. ಆದರೂ ಈ ಅಪಘಾತ ನಮ್ಮ ಅಚಾತುರ್ಯದಿಂದಲೇ ಅಪಘಾತವಾಗಿದೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments