Publish Date: Thu, 23 Mar 2023 (08:45 IST)
Updated Date: Thu, 23 Mar 2023 (08:37 IST)
ಬೆಂಗಳೂರು : ಕಾಂಗ್ರೆಸ್ ನಾಯಕ, ಮಾಜಿ ಸಚಿವ ಅಂಜನಮೂರ್ತಿ (78) ನಿಧನರಾಗಿದ್ದಾರೆ.
ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅಂಜನಮೂರ್ತಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ಮೃತಪಟ್ಟಿದ್ದಾರೆ.
ನೆಲಮಂಗಲದಲ್ಲಿ ಮೂರು ಬಾರಿ ಸ್ಪರ್ಧಿಸಿ ಶಾಸಕರಾಗಿದ್ದ ಅವರು ವಸತಿ ಸಚಿವರಾಗಿಯೂ ಕೆಲಸ ಮಾಡಿದ್ದರು. ಈ ಬಾರಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೂಡ ಆಗಿದ್ದರು.