ಸರಕಾರದಿಂದಲೇ ಹಗಲು ದರೋಡೆ ನಡೆಯುತ್ತಿದೆ ಎಂದ ಲೀಡರ್

Webdunia
ಶನಿವಾರ, 16 ಮಾರ್ಚ್ 2019 (13:52 IST)
ಸರಕಾರದಿಂದಲೇ ಹಗಲು ದರೋಡೆ ನಡೆಯುತ್ತಿದೆ. ಹೀಗಂತ ಶಿವಮೊಗ್ಗದಲ್ಲಿ ಆಯನೂರು ಮಂಜುನಾಥ್ ಆರೋಪ ಮಾಡಿದ್ದಾರೆ.

ಪಿಯುಸಿ ಉಪನ್ಯಾಸಕರು ಮೌಲ್ಯ ಮಾಪನವನ್ನು ಬಹಿಷ್ಕಾರ ಹಾಕುವುದಾಗಿ ಹೇಳುತ್ತಿದ್ದಾರೆ. 2 ನೇ ಹೆಚ್ಚುವರಿ ವೇತನ ಭತ್ಯೆ, ಕಾಲ್ಪನಿಕ ವೇತನ ಸೇರಿದಂತೆ ಅನೇಕ ಬೇಡಿಕೆ ಈಡೇರಿಸಲು ಉಪನ್ಯಾಸಕರು ಆಗ್ರಹಿಸುತ್ತಲೇ ಬಂದಿದ್ದಾರೆ.

ಇತ್ತೀಚೆಗೆ ಸಕಾಲಕ್ಕೆ ಸರಿಯಾಗಿ ವೇತನ ನೀಡುತ್ತಿಲ್ಲ. ಆರು ತಿಂಗಳಿಂದ ಸಂಬಳ ಇಲ್ಲ. ಈ ನಡುವೆ ಮೇ ಮೊದಲ ವಾರದಿಂದಲೇ ತರಗತಿ ಆರಂಭಿಸಬೇಕು ಎಂದು ಇಲಾಖೆಯ ಅಧಿಕಾರಿಗಳು ಸೂಚನೆ ನೀಡುತ್ತಿದ್ದಾರೆ. ಸಮಸ್ಯೆ ಬಗೆ ಹರಿಸಬೇಕಾದ ಸಚಿವರು ರಾಜೀನಾಮೆ ನೀಡಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಇದೀಗ ಸಿಎಂ ಕುಮಾರಸ್ವಾಮಿ ಅವರ ಬಳಿ ಇದೆ. ಕಳೆದ ತಿಂಗಳು ಮಾತುಕತೆಗೆ ದಿನಾಂಕ ನಿಗದಿಯಾಗಿದ್ದರೂ ನಡೆಯಲಿಲ್ಲ. ನಿನ್ನೆ ಮತ್ತೊಮ್ಮೆ ಸಭೆ ಆಗಬೇಕಿತ್ತಾದರೂ ಸಿಎಂ ಬರಲಿಲ್ಲ. ಆರೋಗ್ಯ ಇಲಾಖೆಯ ನೌಕರರ ಪರಿಸ್ಥಿತಿಯೂ ಇದೇ ರೀತಿ ಇದೆ ಎಂದರು.

ಎನ್.ಪಿ.ಎಸ್. ನೌಕರರ ಸಮಸ್ಯೆ ಬಗೆಹರಿದಿಲ್ಲ. ಸರಕಾರದಿಂದಲೇ ಹಗಲು ದರೋಡೆ ನಡೆಯುತ್ತಿದೆ. ಮಾಜಿ ಪ್ರಧಾನಿ ದೇವೇಗೌಡ ತಮ್ಮ ಮೊಮ್ಮಕ್ಕಳ ಬಗ್ಗೆ ಕಣ್ಣೀರು ಸುರಿಸುತ್ತಿದ್ದಾರೆ. ಕೇವಲ ಕಾಂಗ್ರೆಸ್ ಭಾರತವಾದರೆ ಸಾಲದು. ಕಣ್ಣೀರು ಮುಕ್ತವೂ ಆಗಬೇಕು ಎಂದು ಸೂಕ್ಷ್ಮವಾಗಿ ಕುಟುಕಿದರು.

ಇದೀಗ ಚುನಾವಣೆ ನೀತಿ ಸಂಹಿತೆ ಹೆಸರಿನಲ್ಲಿ ಹೋರಾಟವನ್ನು ಹತ್ತಿಕ್ಕುವ ಯತ್ನ ನಡೆದಿದೆ ಅಂತಾನೂ ಅವ್ರು ದೂರಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

ಮುಂದಿನ ಸುದ್ದಿ
Show comments