Select Your Language

Notifications

webdunia
webdunia
webdunia
webdunia

ಆರ್‌ಎಸ್‌ಎಸ್‌ ನೋಂದಣಿ ವಿವಾದ ಮಹತ್ವದ ನಿರ್ಧಾರ ಕೈಗೊಂಡ ನಾಯಕರು, ಇಲ್ಲಿದೆ ಮಾಹಿತಿ

Mohan Bhagwat
ಬೆಂಗಳೂರು: ಆರ್‌ಎಸ್‌ಎಸ್‌ ನೋಂದಣಿ ವಿವಾದ ಸಂಬಂಧ ಆರ್‌ಎಸ್‌ಎಸ್‌  ನೋಂದಣಿ ವಿವಾದಕ್ಕೆ ಸಂಬಂಧಸಂಘದ ಮುಖಂಡರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. 

ಈ ಕುರಿತು ಇಂದು ನಡೆದ ಆರ್‌ಎಸ್‌ಎಸ್‌ ಬೈಠಕ್‌ನಲ್ಲಿ ಬಿಜೆಪಿ ನಾಯಕರಿಗೂ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಆರ್‌ಎಸ್‌ಎಸ್‌ ನೋಂದಣಿ ವಿಚಾರಕ್ಕೆ ಸಂಬಂಧಿಸಿದಂತೆ ಸರಸಂಘಚಾಲಕ ಮೋಹನ್ ಭಾಗವತ್ ಈಗಾಗಲೇ ಹಲವು ಬಾರಿ ಸ್ಪಷ್ಟನೆ ನೀಡಿದ್ದಾರೆ. 

ಕೇರಳದಲ್ಲಿಯೂ ಈ ಕುರಿತು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಕರ್ನಾಟಕದಲ್ಲೂ ಈ ವಿಷಯದ ಬಗ್ಗೆ ಈ ಹಿಂದೆ ಮಾತನಾಡಲಾಗಿದೆ ಎಂದು ಸಂಘದ ಮುಖಂಡರು ಸಭೆಯಲ್ಲಿ ಉಲ್ಲೇಖ ಮಾಡಿದ್ದಾರೆ. 

ನೂರು ವರ್ಷಗಳಿಂದಲೂ ಸಂಘದ ಬಗ್ಗೆ ಪ್ರಶ್ನೆಗಳು ಎದ್ಧೇಳುತ್ತಾನೆ ಇದೆ. ಈ ವಿಚಾರವನ್ನು ಮುಂದುವರಿಸಿಕೊಂಡು ಹೋಗುವ ಅವಶ್ಯಕತೆ ಇಲ್ಲ ಎಂಬ ಅಭಿಪ್ರಾಯವನ್ನೂ ಸಭೆಯಲ್ಲಿ ವ್ಯಕ್ತಪಡಿಸಲಾಗಿದೆ.

ಪ್ರಿಯಾಂಕ್ ಖರ್ಗೆ ಅವರು ಕೇಳಿರುವ ಪ್ರಶ್ನೆಗಳು ರಾಜಕೀಯ ಉದ್ದೇಶದಿಂದಲೇ ಕೇಳಿರುವುದು ಸ್ಪಷ್ಟ. ಆದ್ದರಿಂದ ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದರೆ ವಿವಾದ ಮತ್ತಷ್ಟು ಜೀವಂತವಾಗುವ ಸಾಧ್ಯತೆಯಿದೆ.  ಆದ್ದರಿಂದ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡದೆ ಸುಮ್ಮನಿರುವುದೇ ಸೂಕ್ತ ಎಂದು ಸಂಘದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಾಂಜಾ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಅಜ್ಜಿಯನ್ನೇ ಕೊಂದ ಮೊಮ್ಮಗ