Webdunia - Bharat's app for daily news and videos

Install App

ಸೋರುತಿಹುದು ಅಂಬಾವಿಲಾಸ ಅರಮನೆಯ ಮಾಳಿಗೆ…!

Webdunia
ಶುಕ್ರವಾರ, 29 ಸೆಪ್ಟಂಬರ್ 2017 (21:18 IST)
ಮೈಸೂರು:  ವಿಶ್ವವಿಖ್ಯಾತ ನಾಡಹಬ್ಬ ದಸರಾ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಇದರ ಮಧ್ಯೆ ಮೂರು ದಿನದಿಂದ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮ ಮೈಸೂರು ಅರಮನೆ ಛಾವಣಿ ಸೋರುತ್ತಿದೆ.

ಅಂಬಾವಿಲಾಸ ಅರಮನೆಯ ದರ್ಬಾರ್ ಹಾಲ್ ಮತ್ತು ಕಲ್ಯಾಣ ಮಂಟಪದಲ್ಲಿ ನೀರು ಸೋರುತ್ತಿದ್ದು, ನೆಲಹಾಸುಗಳು ಮಳೆ ನೀರಿನಿಂದ ಒದ್ದೆಯಾಗಿವೆ.  ನಾಡಹಬ್ಬ ದಸರಾ ನಡೆಯುತ್ತಿರುವ ಬೆನ್ನಲ್ಲೇ ಅರಮನೆಗೆ ಈ ಸ್ಥಿತಿ ಬಂದಿದೆ. ರತ್ನ ಖಚಿತ ಸಿಂಹಾಸನ ಕೂಡ ದರ್ಬಾರ್ ಹಾಲ್ ನಲ್ಲೇ ಇದೆ. ಸಿಂಹಾಸನ ವೀಕ್ಷಣೆಗೆ ತೆರಳಿದ ಪ್ರವಾಸಿಗರ ಗಮನಕ್ಕೆ ಮಳೆ ನೀರು ಸೋರಿಕೆಯಾಗಿರುವುದು ಕಂಡು ಬಂದಿದೆ ಎನ್ನಲಾಗಿದೆ.

ನಾಡಹಬ್ಬಕ್ಕೆ ಕೋಟ್ಯಂತರ ರೂ. ಖರ್ಚು ಮಾಡುವ ಸರ್ಕಾರಕ್ಕೆ ಅರಮನೆ ಬಗ್ಗೆ ಕಾಳಜಿಯೇ ಇಲ್ಲವೆ ಎಂಬ ಪ್ರಶ್ನೆ ಪ್ರವಾಸಿಗರಲ್ಲಿ ಮೂಡಿದೆ. ದರ್ಬಾರ್ ಹಾಲ್, ಕಲ್ಯಾಣ ಮಂಟಪ ದುರಸ್ಥಿ ಬಗ್ಗೆ ಅರಮನೆ ಮಂಡಳಿಯೂ ಗಮನ ಹರಿಸಿಲ್ಲ ಅನ್ನೋ ಆರೋಪ ಕೇಳಿ ಬಂದಿದೆ.
ಮೈಸೂರು ಅರಮನೆಯಲ್ಲಿ ಮಳೆ ಬಂದಾಗ 3 ರಿಂದ 4 ಕಡೆ ನೀರು ಸೋರುತ್ತಿರುವುದು ನಿಜ. ಅರಮನೆ ದುರಸ್ಥಿ ಮಾಡಿಸಲು ಸಾಧ್ಯವಾಗುತ್ತಿಲ್ಲ ಎಂದು ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಹ್ಮಣ್ಯ ಹೇಳಿದ್ದಾರೆ.

ಮೇಲ್ಛಾವಣಿಯಲ್ಲಿ ಕೆಲವು ಕಡೆ ಗಾಜುಗಳು ಒಡೆದಿವೆ. ಆ ಜಾಗದಿಂದ ಮಳೆ ನೀರು ಬರುತ್ತಿದೆ. ಅವುಗಳಿಗೆ ಟಾರ್ಪಲ್ ಹೊದಿಸಲಾಗಿದೆ.  ಗಾಜು ರಿಪೇರಿ ಮಾಡುವವರು ಸಿಗುತ್ತಿಲ್ಲ. ಅರಮನೆ ಮೆಲ್ಛಾವಣಿ ದುರಸ್ಥಿಗೆ ಪ್ರತ್ಯೇಕ ಸಮಿತಿ ರಚಿಸಲಾಗಿದ್ದು, ಲಂಡನ್, ಜೈಪುರ ತಂತ್ರಜ್ಞರನ್ನು ಈ ವಿಚಾರವಾಗಿ ಸಂಪರ್ಕಿಸಲಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments