ಸೋರುತಿಹುದು ಅಂಬಾವಿಲಾಸ ಅರಮನೆಯ ಮಾಳಿಗೆ…!

Webdunia
ಶುಕ್ರವಾರ, 29 ಸೆಪ್ಟಂಬರ್ 2017 (21:18 IST)
ಮೈಸೂರು:  ವಿಶ್ವವಿಖ್ಯಾತ ನಾಡಹಬ್ಬ ದಸರಾ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಇದರ ಮಧ್ಯೆ ಮೂರು ದಿನದಿಂದ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮ ಮೈಸೂರು ಅರಮನೆ ಛಾವಣಿ ಸೋರುತ್ತಿದೆ.

ಅಂಬಾವಿಲಾಸ ಅರಮನೆಯ ದರ್ಬಾರ್ ಹಾಲ್ ಮತ್ತು ಕಲ್ಯಾಣ ಮಂಟಪದಲ್ಲಿ ನೀರು ಸೋರುತ್ತಿದ್ದು, ನೆಲಹಾಸುಗಳು ಮಳೆ ನೀರಿನಿಂದ ಒದ್ದೆಯಾಗಿವೆ.  ನಾಡಹಬ್ಬ ದಸರಾ ನಡೆಯುತ್ತಿರುವ ಬೆನ್ನಲ್ಲೇ ಅರಮನೆಗೆ ಈ ಸ್ಥಿತಿ ಬಂದಿದೆ. ರತ್ನ ಖಚಿತ ಸಿಂಹಾಸನ ಕೂಡ ದರ್ಬಾರ್ ಹಾಲ್ ನಲ್ಲೇ ಇದೆ. ಸಿಂಹಾಸನ ವೀಕ್ಷಣೆಗೆ ತೆರಳಿದ ಪ್ರವಾಸಿಗರ ಗಮನಕ್ಕೆ ಮಳೆ ನೀರು ಸೋರಿಕೆಯಾಗಿರುವುದು ಕಂಡು ಬಂದಿದೆ ಎನ್ನಲಾಗಿದೆ.

ನಾಡಹಬ್ಬಕ್ಕೆ ಕೋಟ್ಯಂತರ ರೂ. ಖರ್ಚು ಮಾಡುವ ಸರ್ಕಾರಕ್ಕೆ ಅರಮನೆ ಬಗ್ಗೆ ಕಾಳಜಿಯೇ ಇಲ್ಲವೆ ಎಂಬ ಪ್ರಶ್ನೆ ಪ್ರವಾಸಿಗರಲ್ಲಿ ಮೂಡಿದೆ. ದರ್ಬಾರ್ ಹಾಲ್, ಕಲ್ಯಾಣ ಮಂಟಪ ದುರಸ್ಥಿ ಬಗ್ಗೆ ಅರಮನೆ ಮಂಡಳಿಯೂ ಗಮನ ಹರಿಸಿಲ್ಲ ಅನ್ನೋ ಆರೋಪ ಕೇಳಿ ಬಂದಿದೆ.
ಮೈಸೂರು ಅರಮನೆಯಲ್ಲಿ ಮಳೆ ಬಂದಾಗ 3 ರಿಂದ 4 ಕಡೆ ನೀರು ಸೋರುತ್ತಿರುವುದು ನಿಜ. ಅರಮನೆ ದುರಸ್ಥಿ ಮಾಡಿಸಲು ಸಾಧ್ಯವಾಗುತ್ತಿಲ್ಲ ಎಂದು ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಹ್ಮಣ್ಯ ಹೇಳಿದ್ದಾರೆ.

ಮೇಲ್ಛಾವಣಿಯಲ್ಲಿ ಕೆಲವು ಕಡೆ ಗಾಜುಗಳು ಒಡೆದಿವೆ. ಆ ಜಾಗದಿಂದ ಮಳೆ ನೀರು ಬರುತ್ತಿದೆ. ಅವುಗಳಿಗೆ ಟಾರ್ಪಲ್ ಹೊದಿಸಲಾಗಿದೆ.  ಗಾಜು ರಿಪೇರಿ ಮಾಡುವವರು ಸಿಗುತ್ತಿಲ್ಲ. ಅರಮನೆ ಮೆಲ್ಛಾವಣಿ ದುರಸ್ಥಿಗೆ ಪ್ರತ್ಯೇಕ ಸಮಿತಿ ರಚಿಸಲಾಗಿದ್ದು, ಲಂಡನ್, ಜೈಪುರ ತಂತ್ರಜ್ಞರನ್ನು ಈ ವಿಚಾರವಾಗಿ ಸಂಪರ್ಕಿಸಲಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಮುಂದಿನ ಸುದ್ದಿ
Show comments