ಬಸ್ ಪ್ರಯಾಣಿಕರಿಗೆ ಖುಷಿ ಸುದ್ದಿ

Webdunia
ಸೋಮವಾರ, 1 ಜೂನ್ 2020 (19:12 IST)
ಕೆಂಪು ವಲಯವಿಲ್ಲದ ಅಂತರ ರಾಜ್ಯದ ಪ್ರದೇಶಗಳಿಗೆ ಬಸ್ ಓಡಿಸಲು ಚರ್ಚೆ ನಡೆದಿದೆ.

ಸದ್ಯದಲ್ಲಿ ಈ ಕುರಿತು ಸರಕಾರ ನಿರ್ಧಾರ ಪ್ರಕಟಿಸಲಿದೆ. ಒಟ್ಟಾರೆ ನಷ್ಟವನ್ನು ಸರಿದೂಗಿಸಲು ಲಾಭವಲ್ಲದ ಮಾರ್ಗಗಳಲ್ಲಿ ಬಸ್ ಸಂಚಾರ ಕಡಿಮೆ ಮಾಡುವುದು, ಅನಾವಶ್ಯಕವಾಗಿರುವ ಸಿಬ್ಬಂದಿ ಕಡಿಮೆ ಮಾಡುವುದು, ಮೊದಲಾದ ಕ್ರಮ ತೆಗೆದುಕೊಳ್ಳಲಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಲಾಕ್ ಡೌನ್ ಹಿನ್ನಲೆಯಲ್ಲಿ ರಾಜ್ಯದ ಸಾರಿಗೆ ಸಂಸ್ಥೆ ಅನುಭವಿಸುತ್ತಿರುವ ನಷ್ಟವನ್ನು ಇನ್ನು ಎರಡು ತಿಂಗಳ ಕಾಲ ರಾಜ್ಯ ಸರ್ಕಾರವೇ ಭರಿಸಬೇಕಿದೆ. ಈ ಕುರಿತು ಮುಖ್ಯಮಂತ್ರಿಗಳ ಜೊತೆ ಮಾತನಾಡಿದೆ. ಲಾಕ್ ಡೌನ್ ಹಿನ್ನಲೆಯಲ್ಲಿ ನಾಲ್ಕು ಸಾರಿಗೆ ಸಂಸ್ಥೆಗಳಿಂದ 1800 ಕೋಟಿ ರೂ ನಷ್ಟ ಉಂಟಾಗಿದೆ.

ಸಾಮಾಜಿಕ ಅಂತರ ಕಾಯ್ದುಕೊಂಡು ಈಗ ಸಾರಿಗೆ ಸಂಚಾರ ಆರಂಭಿಸಿದ್ದರೂ,  ಮೊದಲಿಗಿಂತ ಈಗ ಹೆಚ್ಚಿನ ನಷ್ಟ ಉಂಟಾಗುತ್ತಿದೆ. ಇದಕ್ಕೆ ಕಾರಣ ಕಡಿಮೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುವುದಾಗಿದೆ ಎಂದಿದ್ದಾರೆ.  

ಪ್ರತಿ ನಿತ್ಯ 6 ಕೋಟಿ ರೂ. ನಷ್ಟವಾಗುತ್ತಿದೆ. ಆದರೂ ಜನರ ಅಗತ್ಯತೆ ಹಿನ್ನಲೆಯಲ್ಲಿ ಸೇವೆಯಾಗಿ ಬಸ್ ಗಳನ್ನು ಓಡಿಸಲಾಗುತ್ತಿದೆ. ಹಂತ ಹಂತವಾಗಿ ಗ್ರಾಮೀಣ ಪ್ರದೇಶಕ್ಕೆ ಓಡಿಸಲಾಗುತ್ತದೆ ಎಂದಿದ್ದಾರೆ. ಸಾಮಾಜಿಕ ಅಂತರಿವಿಲ್ಲದೇ ಬಸ್ ಓಡಿಸಿದಾಗ ಮಾತ್ರ ಸಾರಿಗೆ ಇಲಾಖೆಯ ನಷ್ಟ ತಪ್ಪುತ್ತದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments