Webdunia - Bharat's app for daily news and videos

Install App

ಭಾವಿ ಪತಿ ಟೀಕೆಗೆ ಬೇಸತ್ತು ಸಾವಿಗೆ ಶರಣಾದ ಉಪನ್ಯಾಸಕಿ

Webdunia
ಮಂಗಳವಾರ, 22 ಮಾರ್ಚ್ 2016 (16:44 IST)
ಇನ್ನು ನಾಲ್ಕೈದು ದಿನಗಳಲ್ಲಿ ಮದುವೆಯಾಗಬೇಕಿದ್ದ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾದ ಘಟನೆ ಮಂಡ್ಯದಲ್ಲಿ ನಡೆದಿದೆ. 
 
ಮೃತಳನ್ನು ಶೃತಿ(25) ಎಂದು ಗುರುತಿಸಲಾಗಿದ್ದು ಎಂಟೆಕ್ ಓದಿದ್ದ ಅವರು ಎಂಜಿನಿಯರಿಂಗ್ ಕಾಲೇಜ್‍ನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. 
 
ಶೃತಿಯ ಮದುವೆ ಮಾರ್ಚ್ 27 ರಂದು ನಿಶ್ಚಯವಾಗಿತ್ತು.
 
ಹಾಸನ ಜಿಲ್ಲೆ ಚನ್ನರಾಯಪಟ್ಟಣದ ನಿವಾಸಿ ಹುತ್ತೇಶ್ ಎಂಬ ಯುವಕನೊಂದಿಗೆ ಮದುವೆ ಶೃತಿ ಮದುವೆ ನಿಶ್ಚಯವಾಗಿತ್ತು. ರಾಜ್ಯ ರಾಜಧಾನಿಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಹುತ್ತೇಶ್ ಅವರ ಕುಟುಂಬದವರು ಹೆಚ್ಚಿನ ವರದಕ್ಷಿಣೆ ನೀಡುವಂತೆ ಶೃತಿ ಮನೆಯವರಿಗೆ ಡಿಮ್ಯಾಂಡ್ ಇಟ್ಟಿದ್ದರಂತೆ.ಇದರಿಂದ ಶೃತಿ ತೀವ್ರ ನೊಂದಿದ್ದರು. ಜತೆಗೆ ಭಾವಿ ಪತ್ನಿ ಮಾಡರ್ನ್ ಆಗಿಲ್ಲವೆಂದು ಹುತ್ತೇಶ್ ಟೀಕಿಸುತ್ತಿದ್ದರಂತೆ. ಅದರಿಂದ ಮನನೊಂದಿದ್ದ ಶೃತಿ ಮಾರ್ಚ್ 17 ರಂದು ವಿಷ ಕುಡಿದು ಆತ್ಮಹತ್ಯೆ ಯತ್ನಿಸಿದ್ದಳು. ಮನೆಯವರು ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶೃತಿ ಇಂದು ದುರ್ಮರಣವನ್ನಪ್ಪಿದ್ದಾರೆ. 
 
ಡೆತ್ ನೋಟ್ ವಶಪಡಿಸಿಕೊಂಡಿರುವ ಕೆಆರ್ ಪೇಟೆ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments