Webdunia - Bharat's app for daily news and videos

Install App

ಉಪನ್ಯಾಸಕಿ ಕೊಲೆ ಪ್ರಕರಣ: ವಿದ್ಯಾರ್ಥಿ ಬಂಧನ

Webdunia
ಮಂಗಳವಾರ, 3 ಮೇ 2016 (15:37 IST)
ಲಿಂಗಸೂಗೂರಿನ ಖಾಸಗಿ ಕಾಲೇಜು ಉಪನ್ಯಾಸಕಿ ಫರಜಹಾನ್ ಬೇಗಂ ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ವೀರೇಶ್ ಶೆಟ್ಟಿ ಎಂದು ಗುರುತಿಸಲಾಗಿದ್ದು ಆತ ಮೃತಳ ವಿದ್ಯಾರ್ಥಿ ಎಂದು ಹೇಳಲಾಗುತ್ತಿದೆ. 
 
ಏಪ್ರಿಲ್‌ 14ರಂದು ಉಪನ್ಯಾಸಕಿ ನಾಪತ್ತೆಯಾಗಿದ್ದಳು. ಹಟ್ಟಿಯಿಂದ ಕಾಲೇಜಿಗೆ ತೆರಳಿದ್ದ ಉಪನ್ಯಾಸಕಿ ಫರಜಹಾನ್ ಬೇಗಂ (26) ಅಂದು ಮನೆಗೆ ಹಿಂತಿರುಗಿರಲಿಲ್ಲ. ನಾಪತ್ತೆಯಾದ 8 ದಿನಗಳ ಬಳಿಕ ಅಂದರೆ ಏಪ್ರಿಲ್ 22 ರಂದು ಮಾನವಿ ತಾಲೂಕಿನ ಸಿರವಾರದ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಆಕೆ ಶವವಾಗಿ ಪತ್ತೆಯಾಗಿದ್ದಳು. ಆಕೆಯ ಶವವನ್ನು ಮೂಟೆ ಕಟ್ಟಿ ಎಸೆಯಲಾಗಿತ್ತು. 
 
ಪ್ರಕರಣ ದಾಖಲಿಸಿಕೊಂಡಿದ್ದ ಸಿರವಾರ ಪೊಲೀಸರಿಗೆ ಇದು ಸವಾಲಾಗಿ ಕಾಡಿತ್ತು. ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಅವರು ಯಶಸ್ವಿಯಾಗಿದ್ದಾರೆ. 
 
ತನ್ನ ಉಪನ್ಯಾಸಕಿ ಫರಜಹಾನ್‌‌ನನ್ನು ಪ್ರೀತಿಸುತ್ತಿದ್ದ ಆರೋಪಿ ವಿರೇಶ್ ಶೆಟ್ಟಿ ಮದುವೆಯಾಗುವ ಇಚ್ಛೆ ವ್ಯಕ್ತಪಡಿಸಿದ್ದ ಎನ್ನಲಾಗಿದೆ. ಆ ಫರಜಹಾನ್‌‌ ಮದುವೆಗೆ ನಿರಾಕರಿಸಿದ್ದು ಇತ್ತೀಚಿಗೆ ಬೇರೊಬ್ಬರ ಜತೆಗೆ ಅವಳ ನಿಶ್ಚಿತಾರ್ಥವಾಗಿತ್ತು. ತನಗೆ ಸಿಗದವಳು ಯಾರಿಗೂ ಸಿಗಬಾರೆಂದು ನಿರ್ಧರಿಸಿದ ಆತ ಆಕೆಯನ್ನು ಅಪಹರಿಸಿ ಕೊಂದಿದ್ದಾನೆ ಎಂದು ಹೇಳಲಾಗುತ್ತಿದೆ. ತನಿಖೆಯ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ಹೊರಬೀಳಲಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments