Webdunia - Bharat's app for daily news and videos

Install App

ಯಾರೇ ಆದರೂ ಕಾನೂನು ಕ್ರಮ ಆಗಲಿದೆ-ಗೃಹ ಸಚಿವ ಪರಮೇಶ್ವರ್

Webdunia
ಸೋಮವಾರ, 1 ಜನವರಿ 2024 (14:42 IST)
ನಗರದಲ್ಲಿ ಮಾತನಾಡಿದ ಪರಮೇಶ್ವರ್ ಹೊಸ ವರ್ಷದ ಶುಭಾಷಯಗಳನ್ನ ತಿಳಿಸಿದ್ದಾರೆ.ಜನ ಸಮುದಾಯದ ಹಿತ ಕಾಪಾಡಿಕೊಂಡಿದ್ದಾರೆ.ನಿನ್ನೆ ನಡೆದ ಹೊಸ ವರ್ಷದ ಸಂಭ್ರಮಾಚರಣೆ ಶಾಂತಿಯುತವಾಗಿ ಆಗಿದೆ.ಯಾವುದೇ ಅಹಿತಕರ ಘಟನೆ ನಡೆಯಬಾರು ಅಂತ ಅಂದುಕೊಂಡ್ವಿ.ಅದರಂತೆ ಪೊಲೀಸವರು ಕೆಲಸ ಮಾಡಿದ್ದಾರೆ.ಅವರಿಗೆ ವಿಶೇಷ ಅಭಿನಂದನೆ ಗಳು.ಇಡೀ ರಾಜ್ಯದ ಜನ ಸಹಕರಿಸಿದ್ದಾರೆ ಅವರಿಗೂ ಧನ್ಯವಾದ.ಸಣ್ಣಪುಟ್ಟ ಘಟನೆ ಬಿಟ್ಟರೆ ಶಾಂತಿಯುತವಾಗಿ ಹೊಸವರ್ಷ ಪ್ರಾರಂಭವಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.
 
ಡಿಸಿಎಂ ನೋಟೀಸ್ ವಿಚಾರವಾಗಿ ಅದು ಇಲಾಖಾವಾರು ಕೆಲಸ ಆಗಿದೆ.ಸಿಬಿಐ ಅವರು ಅವರ ಕೆಲಸ ಮಾಡ್ತಾ ಇದ್ದಾರೆ.ನಾವು ನಮ್ಮ ಕೆಲಸ ಮಾಡ್ತೀವಿ.ಅವರಿಗೆ ಯಾಕೆ ನೋಟೀಸ್ ಕೊಟ್ಟಿದ್ದಾರೆ ಗೊತ್ತಿಲ್ಲ.ಇನ್ನೂ ದೆಹಲಿಗೆ ಸಿಎಂ ಡಿಸಿಎಂ ಹೋಗುವ ವಿಚಾರವಾಗಿ ದೆಹಲಿಯಲ್ಲಿ ಹೈ ಕಮಾಂಡ್ ಸಿಎಂ ಡಿಸಿಎಂ ನ ಕರೆದಿದ್ದಾರೆ.ಅವರು ದೆಹಲಿಗೆ ಹೋಗ್ತಾ ಇದ್ದಾರೆ.ಲೋಕಸಭಾ ಚುನಾವಣೆ ಪ್ರಿಪರೇಷನ್ ಗೆ ಹೋಗ್ತ ಇದ್ದಾರೆ.ನಾವು ನಮ್ಮ ಅಭಿಪ್ರಾಯ ಇವರಿಗೆ ಹೇಳಿದ್ದೇವೆ.ಹಾಗಾಗಿ ನಮಗೆ ಕರೆಯುವ ಅವಶ್ಯಕತೆ ಇಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.
 
ಪ್ರತಾಪ್ ಸಿಂಹ ಅವರು ತಮ್ಮನ ಬಂಧನ ವಿಚಾರವಾಗಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು,ಇದರಲ್ಲಿ ಯಾವುದೂ ರಾಜಕೀಯ ಇರಬಾರದು.ಮರ ಕಡೆದಿದ್ದಾರೆ ಹಾಗಾಗಿ ಕ್ರಮ ಆಗಿದೆ.ಸಿಎಂ ಮಾಡಿಸಿದ್ದಾರೆ ಅನ್ನೋದು ಸರಿಯಲ್ಲ.ಯಾರೇ ಆದರೂ ಕಾನೂನು ಕ್ರಮ ಆಗಲಿದೆ.ಪ್ರತಾಪ್ ಸಿಂಹ ತಮ್ಮ ಆದರೂ ಸರಿ ಬೇರೆ ಆದರೂ ಸರಿ.ಈ ನೆಲದ ಕಾನೂನಿಗೆ ಬೆಲೆ ಕೊಡಬೇಕಾಗುತ್ತದೆ.ಇಲ್ಲಿ ಒತ್ತಡ ಹಾಕುವುದು ಏನಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.
 
ರಾಮಮಂದಿರ ಉದ್ಘಾಟನೆಗೆ ಹೋಗುವ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು,ನಾವು ಕೂಡ ಹಿಂದುಗಳೇ,ಬಿಜೆಪಿ ಅವರಷ್ಟೇ ಹಿಂದುಗಳಲ್ಲ.ಹೋಗಬೇಕೋ ಬೇಡವೋ ಅನ್ನೋದನ್ನ ಹೈ ಕಮಾಂಡ್ ತೀರ್ಮಾನ ಮಾಡಲಿದೆ.ರಾಮರಾಜ್ಯ ಅನ್ನೋದು ಎಲ್ಲರಿಗೂ ಇದೆ ಬಿಜೆಪಿಗಷ್ಟೇ ಅಲ್ಲ.ಇಂಡಿಯಾ ಕೂಟಗಳು ರಾಮ ಮಂದಿರ ಉದ್ಘಾಟನೆಗೆ ಹೋಗಬಾರದು ಅನ್ನೋದರ ಬಗ್ಗೆ ದೆಹಲಿ ನಾಯಕರು ತೀರ್ಮಾನ ಮಾಡ್ತಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

ಮುಂದಿನ ಸುದ್ದಿ
Show comments