Webdunia - Bharat's app for daily news and videos

Install App

ಕಾನೂನು ಸಲಹೆಗಾರ ನೇಮಕ: ಸಿಎಂ ವಿರುದ್ಧ ಕುಮಾರಣ್ಣ ಕಿಡಿ

Webdunia
ಭಾನುವಾರ, 21 ಮೇ 2017 (12:41 IST)
ಭ್ರಷ್ಟ ವ್ಯಕ್ತಿಯನ್ನು ಕಾನೂನು ಸಲಹೆಗಾರನಾಗಿ ನೇಮಕ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉದ್ದೇಶವಾದರೂ ಏನು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
 
ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಭ್ರಷ್ಟರಿಗೆ ಮಣೆಹಾಕುತ್ತಿದೆ. ಭ್ರಷ್ಟ ಕಾನೂನು ಸಲಹೆಗಾರ ಮುಖ್ಯಮಂತ್ರಿಗಳಿಗೆ ಯಾವ ರೀತಿ ಸಲಹೆ ನೀಡುತ್ತಾರೆ ಎಂದು ಟಾಂಗ್ ನೀಡಿದರು. 
 
ವಿಕಾಸ್ ಬನ್ಸೋಡೆಯವರಿಗೆ ಕಾನೂನು ಸಲಹೆಗಾರನಾಗಿ ನೇಮಿಸಿ ರಾಜ್ಯ ಸಚಿವನ ಸ್ಥಾನಮಾನ ನೀಡಲಾಗಿದೆ. ಇದೇ ಬನ್ಡೋಡೆ ಟಿಟಿಡಿ ಸಲಹೆಗಾರನಾಗಿದ್ದಾಗ ವ್ಯಾಪಕ ಭ್ರಷ್ಟಾಚಾರ ಮಾಡಿದ್ದರಿಂದ ಅಲ್ಲಿಂದ ಓಡಿಸಲಾಗಿತ್ತು ಎನ್ನುವುದು ಸಿಎಂಗೆ ಗೊತ್ತಿಲ್ಲವೇ ಎಂದು ಟಾಂಗ್ ನೀಡಿದರು.
 
ಬಿಜೆಪಿಯ ಅಧಿಕಾರವಧಿಯಲ್ಲಿ ಕುಂಠಿತವಾಗಿದ್ದ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲಾಗುವುದು ಎಂದು ಅಧಿಕಾರಕ್ಕೇರುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದರೆ, ಕಾಂಗ್ರೆಸ್ ಅವಧಿಯಲ್ಲಿ ಅಭಿವೃದ್ಧಿ ಮತ್ತಷ್ಟು ಕುಂಠಿತವಾಗಿದೆ ಎಂದು ತಿರುಗೇಟು ನೀಡಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments