Select Your Language

Notifications

webdunia
webdunia
webdunia
webdunia

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಸಹಕಾರಕ್ಕೆ ಜೆಡಿಎಸ್ ಮನವಿ

ವಿಧಾನ ಪರಿಷತ್
ಬೆಂಗಳೂರು , ಬುಧವಾರ, 25 ಮೇ 2016 (15:15 IST)
ಭಾರತೀಯ ಜನತಾ ಪಾರ್ಟಿಯವರು ರಾಜ್ಯಸಭೆ ಚುನಾವಣೆಯ ಎರಡನೇಯ ಸ್ಥಾನವನ್ನು ಜೆಡಿಎಸ್‌ ಪಕ್ಷಕ್ಕೆ ಬಿಟ್ಟುಕೊಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಸ್‌ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‌.ಡಿ.ಕುಮಾರಸ್ವಾಮಿ ಕಳೆದ ಬಾರಿ ನಾವು ಭಾರತೀಯ ಜನತಾ ಪಾರ್ಟಿಯನ್ನು ಬೆಂಬಲಿಸಿದ್ದೇವೆ. ಈ ಬಾರಿ ಪರಿಷತ್ ಚುನಾವಣೆಯ ಎರಡನೇಯ ಸ್ಥಾನವನ್ನು ಜೆಡಿಎಸ್‌ ಪಕ್ಷಕ್ಕೆ ಬಿಟ್ಟುಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
 
ನಾಳೆ ರಾಜ್ಯಸಭೆ ಚುನಾವಣೆಯ ಅಂತಿಮ ಪಟ್ಟಿಯನ್ನು ಬಿಡುಗಡೆಗೊಳಿಸುತ್ತಿದ್ದು, ಸುಧಾ ನಾರಾಯಣಮೂರ್ತಿ ಅವರ ಹೆಸರನ್ನು ಅಂತಿಮಗೊಳಿಸಬೇಕು ಎಂಬ ಆಶಯ ನಮ್ಮದಾಗಿತ್ತು. ಆದರೆ, ಅವರು ರಾಜಕೀಯದಲ್ಲಿ ಕಾಣಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ರಾಜ್ಯ ಸಭೆಗೆ ಕನ್ನಡಿಗರನ್ನೇ ನೇಮಕ ಮಾಡಬೇಕು ಎಂಬ ಆಶಯದಿಂದ ಅವರನ್ನು ಪಕ್ಷೇತರವಾಗಿ ಚುನಾವಣೆ ಎದುರಿಸಲು ಮನವಿ ಮಾಡಿದ್ದೇನೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
 

Share this Story:

Follow Webdunia kannada

ಮುಂದಿನ ಸುದ್ದಿ

ಹುಸಿ ಬಾಂಬ್ ಬೆದರಿಕೆ ಹಾಕಿದ್ದ ಎಂ.ಟೆಕ್ ವಿದ್ಯಾರ್ಥಿಗಳ ಬಂಧನ