Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆ ಬಗ್ಗೆ ವಿವಾದಿತ ಹೇಳಿಕೆ ನೀಡಿದ ಶಾಸಕ ಜೀವರಾಜ್ ವಿಚಾರಣೆ: ರಾಮಲಿಂಗಾರೆಡ್ಡಿ’

Webdunia
ಶುಕ್ರವಾರ, 8 ಸೆಪ್ಟಂಬರ್ 2017 (12:25 IST)
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಶಾಸಕ ಜೀವರಾಜ್ ಅವರನ್ನ ತನಿಖೆಗೊಳಪಡಿಸಲು ಸೂಚಿಸಿರುವುದಾಗಿ ಗೃಹ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾ ಆಯೋಜಿಸಿದ್ದ ಬೈಕ್ ರ್ಯಾಲಿ ಸಂದರ್ಭ ಮಾತನಾಡಿದ್ದ ಶಾಸಕ ಜೀವರಾಜ್, ಸಂಘ ಪರಿವಾರದವರ ವಿರುದ್ಧ ಬರೆದಿದ್ದೇ ಕಾರಣ ಎಂಬ ಅರ್ಥ ಬರುವ ರೀತಿ ಮಾತನಾಡಿದ್ದರು. ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿ ದೂರು ಕೂಡ ದಾಖಲಾಗಿತ್ತು. ಇದೀಗ, ಈ ಬಗ್ಗೆ ವಿಚಾರಣೆಗೊಳಪಡಿಸಲು ಸೂಚಿಸಿರುವುದಾಗಿ ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸಿಎಂ ಜೊತೆಗಿನ ಸಭೆ ಬಳಿಕ ಮಾತನಾಡಿದ ರಾಮಲಿಂಗಾರೆಡ್ಡಿ, ಶಾಸಕ ಜೀವರಾಜ್ ಹೇಳಿಕೆ ವಿಚಾರಣೆ ನಡೆಸಲು ಸೂಚಿಸಿದ್ದೇವೆ. ಯಾಕೆ ಆ ರೀತಿ ಹೇಳಿಕೆ ನೀಡಿದ್ದೀರಿ ಎಂದು ಕೇಳಲು ಸೂಚಿಸಿದ್ದೇವೆ. ಬಹಿರಂಗವಾಗಿ ಅಂತಹ ಹೇಳಿಕೆ ನೀಡುವುದು ಸರಿಯಲ್ಲ. ಎಸ್ಐಟಿ ತನಿಖೆ ಬಳಿಕ ಹೇಳಿಕೆ ಬಗ್ಗೆ ಬಗ್ಗೆ ಮತ್ತಷ್ಟು ಸ್ಪಷ್ಟನೆ ಸಿಗುತ್ತೆ ಎಂದು ಅವರು ಹೇಳಿದ್ದಾರೆ.

ಇದೇವೇಳೆ, ಹಂತಕರ ಬಗ್ಗೆ ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ. ಎಸ್`ಐಟಿ ಕೇಳಿದಷ್ಟು ಪೊಲೀಸ್ ಸಿಬ್ಬಂದಿ ನೀಡಿದ್ದೇವೆ .ಮತ್ತಷ್ಟು ಸಿಬ್ಬಂದಿ ನೀಡಲು ಸಿದ್ಧವಿರುವುದಾಗ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments