ಇಂದಿನಿಂದ ವಿಧಾನಮಂಡಲ ಅಧಿವೇಶನ

Webdunia
ಸೋಮವಾರ, 3 ಜುಲೈ 2023 (08:22 IST)
ಬೆಂಗಳೂರು : ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ ಆಗಲಿದ್ದು, 10 ದಿನಗಳ ಕಾಲ ಈ ಅಧಿವೇಶನ ನಡೆಯಲಿದೆ.
 
ಇವತ್ತಿನ ರಾಜ್ಯಪಾಲರ ಭಾಷಣ ಕುತೂಹಲ ಮೂಡಿಸಿದೆ. ಸಂಘರ್ಷದ ಭಾಷಣವೋ? ಸಹಕಾರ ತತ್ವದ ಭಾಷಣವೋ?., ರಾಜ್ಯಪಾಲರ ಭಾಷಣದಲ್ಲಿ ಏನಿರುತ್ತೆ? ಕಾಂಗ್ರೆಸ್ ಸರ್ಕಾರದ ಗೊತ್ತುಗುರಿ ಏನಿರುತ್ತೆ? ದೂರದೃಷ್ಟಿ ಏನು..? ಕೇಂದ್ರದ ಮೇಲೆ ಅಕ್ಕಿ ಕೊಡಲಿಲ್ಲ ಎಂಬ ಟೀಕೆಯೂ ಇರುತ್ತಾ ಅನ್ನೋದು ಸದ್ಯದ ಕುತೂಹಲವಾಗಿದೆ.

ಮತಾಂತರ ನಿಷೇಧ ಕಾಯ್ದೆ ರದ್ದು ಕುರಿತು ಸರ್ಕಾರದ ಸಮರ್ಥನೆ ಬಗ್ಗೆ ಕುತೂಹಲ ಹೆಚ್ಚಿದೆ. ಟಿಪ್ಪು ಜಯಂತಿ, ಟಿಪ್ಪು ಪಠ್ಯದ ಬಗ್ಗೆ ಉಲ್ಲೇಖ ಇರುತ್ತಾ ಎಂಬುದರತ್ತ ಎಲ್ಲರ ಚಿತ್ತ ನೆಟ್ಟಿದೆ. ಅಂದು ವಿಧಾನಸಭೆಯಲ್ಲಿ ಅಂದಿನ ರಾಷ್ಟ್ರಪತಿ ಕೋವಿಂದ್ ಅವರಿಂದ ಕಾಂಗ್ರೆಸ್ ಟಿಪ್ಪು ವಿಷಯ ಪ್ರಸ್ತಾಪಿಸಿತ್ತು. ಆ ವೇಳೆ ವ್ಯಾಪಕ ಟೀಕೆಗೆ ಗುರಿಯಾಗಿ ಬಿಜೆಪಿ ಖಂಡಿಸುವ ಕೆಲಸ ಮಾಡಿತ್ತು. 

ಇನ್ನೊಂದೆಡೆ ಇತ್ತೀಚೆಗೆ ತಮಿಳುನಾಡಿನಲ್ಲೂ ರಾಜ್ಯಪಾಲರು ಹಾಗೂ ಸರ್ಕಾರದ ನಡುವೆ ಸಂಘರ್ಷ ಏರ್ಪಟ್ಟಿತ್ತು. ರಾಜ್ಯಪಾಲರ ಜೊತೆ ಸಹಕಾರ ತತ್ವ ಎನ್ನುವಂತಿದ್ರೆ ಭಾಷಣ ವಿವಾದಗಳಿಂದ ಹೊರತಾಗಿರುತ್ತೆ. ಒಂದು ವೇಳೆ ಸಂಘರ್ಷಕ್ಕೂ ಸೈ, ರಾಜಕೀಯ ಸಮರಕ್ಕೂ ಸೈ ಎನ್ನುವಂತಿದ್ದರೆ ಭಾಷಣದಲ್ಲಿ ವಿವಾದ ಇರಬಹುದು. ಹಾಗಾಗಿ ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ ಮೊದಲ ಜಂಟಿ ಅಧಿವೇಶನದ ಭಾಷಣದ ಬಗ್ಗೆ ಕುತೂಹಲ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕೇಸ್ ಗೆ ಬಿಗ್ ಟ್ವಿಸ್ಟ್: ಕೊನೆಗೂ ಬಯಲಾಯ್ತು ಸತ್ಯ

ಹೊರ್ಮುಜ್ ಜಲಸಂಧಿ ಮೂಲಕ ಚಲಿಸುವ ಹಡಗುಗಳಿಗೆ ಶಾಕ್ ಕೊಟ್ಟ ಇರಾನ್

Video: ಮಹಾರಾಷ್ಟ್ರದ ಸ್ವಯಂಘೋಷಿತ ಜ್ಯೋತಿಷಿಯ ಕಾಮಕಾಂಡ ವಿಡಿಯೋ ವೈರಲ್

Video: ದೆಹಲಿಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ಸಿನಿಮೀಯವಾಗಿ ದರೋಡೆ: ನೋಡಿದರೂ ಓಡಿ ಹೋದ ಜನ

ಸಿಲಿಂಡರ್ ಅಭಾವ ಸರಿಪಡಿಸಲು ಪ್ರಧಾನಿ ಮೋದಿ ಮೊರೆ ಹೋದ ಹೋಟೆಲ್ ಮಾಲಿಕರು

ಮುಂದಿನ ಸುದ್ದಿ
Show comments