Webdunia - Bharat's app for daily news and videos

Install App

ನೆರೆ ನಿರಾಶ್ರಿತರಿಗಾಗಿ ಸಹಾಯ ಹಸ್ತ ನೀಡಿ- ಸಿಎಂ ಬಿಎಸ್ ವೈ ಮನವಿ

Webdunia
ಶುಕ್ರವಾರ, 9 ಆಗಸ್ಟ್ 2019 (14:41 IST)
ಬೆಂಗಳೂರು : ರಾಜ್ಯದೆಲ್ಲೆಡೆ ಸುರಿಯುತ್ತಿರುವ ಮಹಾಮಳೆಗೆ ಕೆಲವಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರವಾಹ ಉಂಟಾಗಿರುವ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.




ಇಂದು ನೆರೆ ಪೀಡಿತ ಮುಧೋಳ, ಜಮಖಂಡಿ, ಕೂಡಲಸಂಗಮ ಹಾಗೂ ಬಾದಾಮಿಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿರುವ ಸಿಎಂ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮಳೆಯಿಂದಾಗಿ ರಾಜ್ಯದಲ್ಲಿ ವಿಪರೀತ ನಷ್ಟ ಉಂಟಾಗಿದೆ. ಕೇಂದ್ರ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡುವ ಭರವಸೆ ನೀಡಿದೆ. ಈ ಕುರಿತು ಕೇಂದ್ರದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ, ಈಗಾಗಲೇ ಕೇಂದ್ರ ಸರ್ಕಾರ ನೆರೆ ಪರಿಹಾರಕ್ಕೆ 100 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ಎಂದು ಹೇಳಿದ್ದಾರೆ.


ಹಾಗೇ ನೆರೆ ಪರಿಹಾರಕ್ಕಾಗಿ ಇನ್ಫೋಸಿಸ್ ನಿಂದ ಸುಧಾಮೂರ್ತಿ 10 ಕೋಟಿ, ಮಾಜಿ ಸಚಿವ ಮುರುಗೇಶ್ ನಿರಾಣಿ ಹಾಗೂ ಕೆಎಂಎಫ್ ತಲಾ 1 ಕೋಟಿ ಹಣ ನೀಡಿದ್ದಾರೆ. ಇನ್ನೂ, ನೆರೆ ನಿರಾಶ್ರಿತರಿಗಾಗಿ ಜನಸಾಮಾನ್ಯರು ಸಂಘ-ಸಂಸ್ಥೆ ಉದ್ದಿಮೆದಾರರು ಸಹಾಯಹಸ್ತ ಚಾಚಬೇಕು, ಸಿಎಂ ಪರಿಹಾರ ನಿಧಿಗೆ ಹಣ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments