Webdunia - Bharat's app for daily news and videos

Install App

ರೈಲ್ವೆಗಾಲಿ ಮತ್ತು ಅಚ್ಚು ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷ

Webdunia
ಭಾನುವಾರ, 27 ಮಾರ್ಚ್ 2022 (20:17 IST)
ಬೆಂಗಳೂರಿನ ಯಲಹಂಕ ರೈಲ್ವೆಗಾಲಿ ಮತ್ತು ಅಚ್ಚು ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ಸಂಚರಿಸ್ತಿರೋ ದೃಶ್ಯಗಲು ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದನ್ನ ಕಂಡ ಕಾರ್ಖಾನೆಯ ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದ್ದು, ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಯಲಹಂಕ ವಲಯ ಅರಣ್ಯಾಧಿಕಾರಿಗಳು ಚಿರತೆ ಹಿಡಿಯಲು ಬೋನಿಟ್ಟು ಕಾರ್ಯಚರಣೆ ನಡೆಸ್ತಿದ್ದಾರೆ. ಕಾರ್ಖಾನೆಯ ಒಳಗೆ ಯಾವುದೇ ಸಿಬ್ಬಂದಿಯನ್ನು ಬಿಡದೆ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರೈಲ್ವೆ ಅಧಿಕಾರಿಗಳು ಹಾಗೂ ಅರಣ್ಯಾಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಚಿರತೆಯನ್ನ ಜೀವಂತವಾಗಿ ಹಿಡಿಯಲು ಸೂಕ್ತ ಸ್ಥಳಗಳಲ್ಲಿ ಬೋನುಗಳನ್ನಿಟ್ಟು ಶೋಧ ನಡೆಸ್ತಿದ್ದಾರೆ. ಇನ್ನು ಚಿರತೆಯ ಚಲನವಲನ ಬಗ್ಗೆ ಪರಿಶೀಲನೆ ನಡೆಸ್ತಿರೋ ಅಧಿಕಾರಿಗಳು ಸಿಂಗನಾಯಕನಹಳ್ಳಿ ಕೆರೆ ಹಾಗೂ ಯಲಹಂಕ ಕೆರೆಕೋಡಿಗಳ ಮೂಲಕ ಚಿರತೆ ರೈಲ್ವೆಗಾಲಿ ಕಾರ್ಖಾನೆಗೆ ಬಂದಿರಬಹುದೆಂದು ಸಂಶಯ ವ್ಯಕ್ತಪಡಿಸಿದ್ದಾರೆ. ಸದ್ಯ ಯಲಹಂಕ ಪೊಲೀಸ್ರು ಜನರಿಗೆ ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಿದ್ದು, ಅರಣ್ಯಾಧಿಕಾರಿಗಳಿಂದ ಚಿರತೆ ಹಿಡಿಯುವ ಕಾರ್ಯ ಮುಂದುವರೆದಿದ್ದು, ಸ್ಥಳೀಯರಲ್ಲಿ ಆತಂಕ ಮನೆ  ಮಾಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments