Webdunia - Bharat's app for daily news and videos

Install App

ಅರಣ್ಯಾಧಿಕಾರಿಗಳ ಯಶಸ್ವಿ ಕಾರ್ಯಾಚರಣೆ: ಬೋನಿಗೆ ಬಿದ್ದ ಚಿರತೆ

Webdunia
ಸೋಮವಾರ, 4 ಮೇ 2015 (12:45 IST)
ಕಳೆದ ಹಲವು ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮೂಲಕ ಇಲ್ಲಿನ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯೊಂದು ಇಂದು ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದ್ದು, ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಸಾರ್ವಜನಿಕರ ಮಾಹಿತಿ ಪ್ರಕಾರ, ಚಿರತೆಯೊಂದು ಕಳೆದ ಹಲವು ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದು, ತಾವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಇಲ್ಲಿನ ಸಾರ್ವಜನಿಕರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಯೋಜನೆ ಹಾಕಿಕೊಂಡಿದ್ದ ಅಧಿಕಾರಿಗಳು, ಜಿಲ್ಲೆಯ ಮಾಗಡಿ ತಾಲೂಕಿನ ಗುಲಗಂಜಿಹಳ್ಳಿ ಗ್ರಾಮದ ಬಳಿ ಬೋನನ್ನು ನಿರ್ಮಿಸಿದ್ದರು. ಅಲ್ಲದೆ ಕಾರ್ಯಾಚರಣೆ ಯಶಸ್ವಿಗಾಗಿ ನಾಯಿಯೊಂದನ್ನು ಬಳಸಿಕೊಂಡು ಮರಕ್ಕೆ ಕಟ್ಟಿ ಹಾಕಿದ್ದರು. ಈ ವೇಳೆ ನಾಯಿಯನ್ನು ತಿನ್ನಲೆಂದು ಬಂದ ಚಿರತೆ ಬೋನಿಗೆ ಬಿದ್ದಿದೆ.

ಅರಣ್ಯಾಧಿಕಾರಿಗಳ ಯಶಸ್ವಿ ಕಾರ್ಯಾಚರಣೆಯಿಂದ ನಿಟ್ಟುಸಿರು ಬಿಟ್ಟಿರುವ ಸಾರ್ವಜನಿಕರು, ಅರಣ್ಯಾಧಿಕಾರಿಗಳ ಕಾರ್ಯ ವೈಖರಿ ಹಾಗೂ ಸೇವೆಯನ್ನು ಮೆಚ್ಚಿದ್ದು, ಅಭಿನಂದನೆ ಸಲ್ಲಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments