Webdunia - Bharat's app for daily news and videos

Install App

ಚಿಲುಮೆ ಅವ್ಯವಹಾರ ತನಿಖೆಯಾಗಲಿ- K.S. ಈಶ್ವರಪ್ಪ

Webdunia
ಮಂಗಳವಾರ, 22 ನವೆಂಬರ್ 2022 (18:49 IST)
ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ಚಿಲುಮೆ ಸಂಸ್ಥೆಯ ಅವ್ಯವಹಾರ ಭಾರೀ ಸಂಚಲನ ಮೂಡಿಸಿದ್ದು, ಚಿಲುಮೆಯ ಭ್ರಷ್ಟಾಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದರ ಬಗ್ಗೆ ಮಾಜಿ ಸಚಿವ K.S. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು,  ಇದರ ಹಿಂದೆ ಎಷ್ಟೇ ಪ್ರಭಾವಿಗಳಿದ್ದರೂ, ಯಾವ ಪಕ್ಷದವರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಆಗಬೇಕು, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಬೇಕು. ಇದರಲ್ಲಿ ಅಶ್ವಥ್ ನಾರಾಯಣ್ ಸೇರಿದಂತೆ  ಬೇರೆ ಯಾರ ಪಾತ್ರ ಇದೆಯೋ, ಇಲ್ಲವೋ ಎಂಬುದು ತನಿಖೆಯಿಂದ ಹೊರಬರಲಿ ಎಂದು ಹೇಳಿದ್ರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕೊಪ್ಪಳದಲ್ಲಿ ಸಿದ್ದರಾಮಯ್ಯರವರು 5 ಜನ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ್ದು, ಡಿ.ಕೆ. ಶಿವಕುಮಾರ್​ಗೆ ಮಾನ, ಮರ್ಯಾದೆ ಇದ್ದರೆ ಸಿದ್ದರಾಮಯ್ಯ ವಿರುದ್ಧ ಶಿಸ್ತು ಕ್ರಮ ಜರುಗಿಸಲಿ. ಸಿದ್ದರಾಮಯ್ಯಗೆ ಹೀಗೆ ಹೇಳಲು ಅಧಿಕಾರ ನೀಡಿದವರು ಯಾರು? ಹಾಗಾದರೆ ಪಕ್ಷದ ವ್ಯವಸ್ಥೆಗಿಂತ ಸಿದ್ದರಾಮಯ್ಯ ದೊಡ್ಡವರೇ ಎಂದು ಈಶ್ವರಪ್ಪ ಪ್ರಶ್ನಿಸಿದ್ರು. ಇದೇ ರೀತಿ 224 ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನೂ ಘೋಷಿಸಿ ಬಿಡಿ, ಅವರ ಬೆಂಬಲಿಗರಿಗೂ ಸಂತಸವಾಗುತ್ತದೆ. ಹೀಗೆ ಆದರೆ ಕಾಂಗ್ರೆಸ್‌ ಸರ್ವನಾಶವಾಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಗುಡುಗಿದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments