ಅಕ್ಷರ ಜಾತ್ರೆಯಲ್ಲಿ ಕನ್ನಡ ತೇರು ಎಳೆಯೋಣ ಬನ್ನಿ ಎಂದ ಅಂಧರು

Webdunia
ಶುಕ್ರವಾರ, 24 ಜನವರಿ 2020 (22:46 IST)
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿಶೇಷ ಚೇತನರು ವಿಶಿಷ್ಟವಾಗಿ ಆಹ್ವಾನ ನೀಡುತ್ತಿದ್ದಾರೆ.

ಅಕ್ಷರ ಜಾತ್ರೆ ಹಿನ್ನೆಲೆಯಲ್ಲಿ ನುಡಿ ಜಾತ್ರೆಗೆ ಆಗಮಿಸುವಂತೆ ಕಲಬುರಗಿ ನಗರದ ಅಂಧ ಮಕ್ಕಳ ಶಾಲೆಯ ವಿದ್ಯಾರ್ಥಿಗಳು ಚಂದ್ರಶೇಖರ್ ಪಾಟೀಲ ಕ್ರೀಡಾಂಗಣದಿಂದ ಕೆ.ಕೆ.ಆರ್.ಡಿ.ಬಿ. ಕಚೇರಿ ವರೆಗೆ ಜಾಥಾ ನಡೆಸುವ ಮೂಲಕ ಜಾಗೃತಿ ಮೂಡಿಸಿದಲ್ಲದೆ ನುಡಿ ಹಬ್ಬಕ್ಕೆ ಬರುವಂತೆ ಕರೆ ನೀಡಿದರು.

ಕೈಯಲ್ಲಿ ಕಟ್ಟಿಗೆ, ಪರಸ್ಪರ ಕೈ ಹಿಡಿದು ಶಿಕ್ಷಕರ ಸಹಾಯದಿಂದ ಸಾಲಾಗಿ ಜಾಥಾದಲ್ಲಿ ಭಾಗವಹಿಸಿದ ಮಕ್ಕಳು “ನಮ್ಮೂರು ಕಲಬುರಗಿಗೆ ಬನ್ನಿ”,  “ಕನ್ನಡ ತೇರು ಎಳೆಯೋಣ ಬನ್ನಿ” ಎಂದು ಕರೆ ನೀಡಿದ ಮಕ್ಕಳು, ಅಕ್ಷರ ಜಾತ್ರೆಗೆ ಆಹ್ವಾನ ನೀಡಿದರು.

ಸಾಹಿತ್ಯ ಸಮ್ಮೇಳನದ ಮಹಿಳಾ ಸಮಿತಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾದ ಈ ಜಾಗೃತಿ ಜಾಥಾದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಜಿ.ಎಸ್.ಗುಣಾರಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಬನ್ಸಿ ಪವಾರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ರೇಣುಕಾದೇವಿ ಸೇರಿದಂತೆ ಮಹಿಳಾ ಸಮಿತಿಯ ಸದಸ್ಯರಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದ ಮಾಜಿ ಸಚಿವ ಸುರೇಶ್ ಕಲ್ಮಾಡಿ ಇನ್ನಿಲ್ಲ

ವಿ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು: ಇದೇನು ಗೂಂಡಾ ಸಂಸ್ಕೃತಿ ಬಿಜೆಪಿ ಆಕ್ರೋಶ

ಮುಖ್ಯಮಂತ್ರಿಯಾಗಿ ಇಂದು ವಿಶಿಷ್ಠ ದಾಖಲೆ ಮಾಡಿದ ಸಿದ್ದರಾಮಯ್ಯ

Karnataka Weather: ಇಂದು ಚಳಿಯ ಜೊತೆ ಕೆಲವೆಡೆ ಮೋಡ ಕವಿದ ವಾತಾವರಣ

ಬೆಂಗಳೂರು: ಇಲ್ಲಿನ ಥಿಯೇಟರ್‌ನಲ್ಲಿ ಮಹಿಳಾ ಟಾಯ್ಲೆಟ್‌ನಲ್ಲಿ ಘಟನೆ ಕೇಳಿದ್ರೆ ಬೆಚ್ಚಿಬೀಳ್ತಿರಾ

ಮುಂದಿನ ಸುದ್ದಿ
Show comments