ಅಕ್ಷರ ಜಾತ್ರೆಯಲ್ಲಿ ಕನ್ನಡ ತೇರು ಎಳೆಯೋಣ ಬನ್ನಿ ಎಂದ ಅಂಧರು

Webdunia
ಶುಕ್ರವಾರ, 24 ಜನವರಿ 2020 (22:46 IST)
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿಶೇಷ ಚೇತನರು ವಿಶಿಷ್ಟವಾಗಿ ಆಹ್ವಾನ ನೀಡುತ್ತಿದ್ದಾರೆ.

ಅಕ್ಷರ ಜಾತ್ರೆ ಹಿನ್ನೆಲೆಯಲ್ಲಿ ನುಡಿ ಜಾತ್ರೆಗೆ ಆಗಮಿಸುವಂತೆ ಕಲಬುರಗಿ ನಗರದ ಅಂಧ ಮಕ್ಕಳ ಶಾಲೆಯ ವಿದ್ಯಾರ್ಥಿಗಳು ಚಂದ್ರಶೇಖರ್ ಪಾಟೀಲ ಕ್ರೀಡಾಂಗಣದಿಂದ ಕೆ.ಕೆ.ಆರ್.ಡಿ.ಬಿ. ಕಚೇರಿ ವರೆಗೆ ಜಾಥಾ ನಡೆಸುವ ಮೂಲಕ ಜಾಗೃತಿ ಮೂಡಿಸಿದಲ್ಲದೆ ನುಡಿ ಹಬ್ಬಕ್ಕೆ ಬರುವಂತೆ ಕರೆ ನೀಡಿದರು.

ಕೈಯಲ್ಲಿ ಕಟ್ಟಿಗೆ, ಪರಸ್ಪರ ಕೈ ಹಿಡಿದು ಶಿಕ್ಷಕರ ಸಹಾಯದಿಂದ ಸಾಲಾಗಿ ಜಾಥಾದಲ್ಲಿ ಭಾಗವಹಿಸಿದ ಮಕ್ಕಳು “ನಮ್ಮೂರು ಕಲಬುರಗಿಗೆ ಬನ್ನಿ”,  “ಕನ್ನಡ ತೇರು ಎಳೆಯೋಣ ಬನ್ನಿ” ಎಂದು ಕರೆ ನೀಡಿದ ಮಕ್ಕಳು, ಅಕ್ಷರ ಜಾತ್ರೆಗೆ ಆಹ್ವಾನ ನೀಡಿದರು.

ಸಾಹಿತ್ಯ ಸಮ್ಮೇಳನದ ಮಹಿಳಾ ಸಮಿತಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾದ ಈ ಜಾಗೃತಿ ಜಾಥಾದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಜಿ.ಎಸ್.ಗುಣಾರಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಬನ್ಸಿ ಪವಾರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ರೇಣುಕಾದೇವಿ ಸೇರಿದಂತೆ ಮಹಿಳಾ ಸಮಿತಿಯ ಸದಸ್ಯರಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments