Webdunia - Bharat's app for daily news and videos

Install App

ಬಿಎಸ್‌ವೈಗೆ ತಾಕತ್ತಿದ್ರೆ ನೇರ ಚರ್ಚೆಗೆ ಬರಲಿ: ಕುಮಾರಸ್ವಾಮಿ

Webdunia
ಗುರುವಾರ, 25 ಮೇ 2017 (18:59 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ತಾಕತ್ತಿದ್ರೆ ಹಿಂದೆ ಷಡ್ಯಂತ್ರ ರೂಪಿಸದೆ ನೇರವಾಗಿ ಚರ್ಚೆಗೆ ಬರಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಹ್ವಾನ ನೀಡಿದ್ದಾರೆ.
 
ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯದ ಅಭಿವೃದ್ಧಿಗೆ ಮಾರಕವಾಗಿವೆ. ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದ್ದರೂ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿವೆ. ರೈತರ ಕಣ್ಣೀರು ಒರೆಸುವಲ್ಲಿ ವಿಫಲವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ರಾಜ್ಯದಾದ್ಯಂತ ಒಂದು ಸುತ್ತಿನ ಪ್ರವಾಸ ಮುಕ್ತಾಯಗೊಳಿಸಿದ್ದು, ಜನತೆ ರಾಷ್ಟ್ರೀಯ ಪಕ್ಷಗಳನ್ನು ದೂರವಿಡಲು ನಿರ್ಧರಿಸಿದ್ದಾರೆ. ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ಗೆ ಮಣೆ ಹಾಕಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 
ಮುಂಬರುವ ವಿಧಾನಸಭೆ ಚುನಾವಣೆ ನಿಗದಿತ ಅವಧಿಗಿಂತ ಮುಂಚಿತವಾಗಿಯೇ ನಡೆಯುವ ಸಾಧ್ಯತೆಗಳಿವೆ. ಆದಾಗ್ಯೂ ಜೆಡಿಎಸ್ ಎಲ್ಲಾ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಮತ್ತೆ ಏರಿಕೆ, ಎಷ್ಟಾಗಿದೆ ನೋಡಿ

Pehalgam: ಪಹಲ್ಗಾಮ್ ನಲ್ಲಿ ರಕ್ತಪಾತ ಮಾಡಿದ ಉಗ್ರರು ಈಗ ಎಲ್ಲಿದ್ದಾರೆ ಎಂಬುದು ಪತ್ತೆ

Viral Video: ಈ ಮಕ್ಕಳಿಗೆ ಯೋಧರ ಮೇಲೆ ಅದೆಂಥಾ ಗೌರವ ನೀವೇ ವಿಡಿಯೋ ನೋಡಿ

ಪಹಲ್ಗಾಮ್ ದಾಳಿಗೆ ಮುಸ್ಲಿಮ್ ಹಣೆಪಟ್ಟಿ ಕಟ್ಟುವ ಯತ್ನ ಎಂದ ಪ್ರಿಯಾಂಕ್ ಖರ್ಗೆಗೆ ನೆಟ್ಟಿಗರಿಂದ ಫೋಟೋ ಸಹಿತ ತಿರುಗೇಟು

Video: ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರ ಮನೆಗಳು ಉಡೀಸ್

ಮುಂದಿನ ಸುದ್ದಿ
Show comments