CMಗೆ ಪ್ರಗತಿಪರ ಚಿಂತಕರಿಂದ ಪತ್ರ

Webdunia
ಮಂಗಳವಾರ, 29 ಮಾರ್ಚ್ 2022 (16:27 IST)
ರಾಜ್ಯ ಸರ್ಕಾರವು ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಸೇರಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು, ಜಾತ್ರೆಗಳಲ್ಲಿ ಮುಸ್ಲಿಂ ಧರ್ಮಕ್ಕೆ ಸೇರಿದ ವ್ಯಾಪಾರಿಗಳಿಗೂ ಅವಕಾಶ ಇರಬೇಕು ಎಂದು ಕರ್ನಾಟಕದ ಬುದ್ಧಿಜೀವಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಹಿಜಾಬ್ ಧರಿಸಿ ಮಕ್ಕಳು ಪರೀಕ್ಷೆ ಬರೆಯಲು ಅವಕಾಶ ನೀಡಲಿ. ಮುಸ್ಲಿಂ ವ್ಯಾಪಾರಿಗಳಿಗೆ ತೊಂದರೆ ಕೊಡದಂತೆ ಕಾನೂನು ತಿದ್ದುಪಡಿ ಮಾಡಬೇಕು ಎಂದು ಮುಖ್ಯಮಂತ್ರಿಗೆ ಬರೆದಿರುವ ಪತ್ರದಲ್ಲಿ ಸಾಹಿತಿಗಳಾದ ಡಾ.ಕೆ.ಮರುಳಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ಬೋಳುವಾರ್ ಮಹಮ್ಮದ್ ಕುಂಞ, ಬಂಜಗೆರೆ ಜಯಪ್ರಕಾಶ್, ರಹಮತ್ ತರೀಕೆರೆ ಸೇರಿದಂತೆ 61 ಬುದ್ಧಿಜೀವಿಗಳು ಪತ್ರ ಬರೆದು ಆಗ್ರಹಿಸಿದ್ದಾರೆ. ಭಗವದ್ಗೀತೆಗಿಂತಲೂ ಸಂವಿಧಾನವನ್ನು ನಮ್ಮ ಮಕ್ಕಳು ಓದಬೇಕು. ಅದಕ್ಕೆ ಹೆಚ್ಚು ಪ್ರಾಮುಖ್ಯತೆ ಸಿಗಬೇಕು ಎಂದು ಸಾಹಿತಿಗಳು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮುಂದಿನ ಸುದ್ದಿ
Show comments