ಇವಿಎಂ ವಿರೋಧಿಸಿ ಕಾಂಗ್ರೆಸ್ ನಿಂದ ಪತ್ರ ಚಳುವಳಿ

Webdunia
ಬುಧವಾರ, 26 ಜೂನ್ 2019 (16:11 IST)
ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ ಇವಿಎಂ  ಬೇಡ ಎಂದು ವಿರೋಧಿಸಿ ಕಾಂಗ್ರೆಸ್ ನಿಂದ ಪತ್ರ ಚಳುವಳಿ ಆರಂಭಗೊಂಡಿದೆ.

ಕೆಪಿಸಿಸಿ ಮಹಿಳಾ ಘಟಕ  ವತಿಯಿಂದ ಪತ್ರಚಳುವಳಿ ನಡೆಸಲಾಯಿತು. ಬೆಂಗಳೂರು ನಗರದ ಅಂಚೆ ಕಚೇರಿ ಮುಂಭಾಗ ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ನೇತೃತ್ವದಲ್ಲಿ ಪ್ರತಿಭಟನಾ ಪತ್ರ ಚಳುವಳಿ ನಡೆಸಿದ ಮಹಿಳಾ ಕಾರ್ಯಕರ್ತರು, ಪ್ರಪಂಚದ ಬಹುದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ಭಾರತಕ್ಕೆ ಇವಿಎಂ ಮತದಾನ ಮಾರಕವಾಗಿ ಪರಿಣಮಿಸುತ್ತಿದೆ.

ಇವಿಎಂ ಬೇಡ, ಮತಪತ್ರ ಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರಪತಿಯವರಿಗೆ ಒಂದು ಲಕ್ಷ ಅಂಚೆಪತ್ರಗಳನ್ನು ರವಾನಿಸಲಾಯಿತು. 

ಪುಷ್ಪಾ ಅಮರನಾಥ್ ಮಾತನಾಡಿ, ಅಮೇರಿಕಾದಂತಹ ಮುಂದುವರಿದ ರಾಷ್ಟ್ರಗಳಲ್ಲಿಯೂ ಸಾಂಪ್ರದಾಯಿಕ ಮತಪತ್ರಗಳನ್ನೇ ಬಳಕೆ ಮಾಡಲಾಗುತ್ತಿದೆ.ಇವಿಎಂ ಬಗ್ಗೆ ಬಹಳ ಅನುಮಾನಗಳಿವೆ.ಹಾಗಾಗಿ ಇವಿಎಂ ಬಳಕೆ ನಿಷೇಧಿಸುವಂತೆ ರಾಷ್ಟ್ರಪತಿಯವರಿಗೆ ಒತ್ತಾಯಿಸುತ್ತಿರುವುದಾಗಿ ಹೇಳಿದರು.

ಶಾಸಕಿ ಸೌಮ್ಯ ರೆಡ್ಡಿ ಮಾತನಾಡಿ, ಬಹುತೇಕ ರಾಷ್ಟ್ರಗಳು ಇವಿಎಂ ವ್ಯವಸ್ಥೆಗೆ ವಿರೋಧ ವ್ಯಕ್ತಪಡಿಸುತ್ತಿವೆ. ಆದರೆ ಭಾರತದಲ್ಲಿ ಮಾತ್ರ ಇವಿಎಂ ಬೇಕು ಎಂದು ಕೇಂದ್ರ ಬಿಜೆಪಿ ಹಠ ಮಾಡುತ್ತಿರುವುದು ಏಕೆ ಎಂಬುದು ಗೊತ್ತಾಗಬೇಕಿದೆ. ಇವಿಎಂ ಎಂಬ ಮಹಾಮಾರಿಯನ್ನು ದೇಶದಿಂದ ಹೊಡೆದೋಡಿಸಬೇಕಿ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments