ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ 2025ನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಉದ್ಘಾಟಿಸಲಿದ್ದಾರೆಂಬ ವದಂತಿಗೆ ಸಿಎಂ ಸಿದ್ದರಾಮಯ್ಯ ಕೊನೆಗೂ ಮೌನಮುರಿದಿದ್ದಾರೆ.
ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಈ ಬಾರಿಯಾ ದಸರಾವನ್ನು ಸೋನಿಯಾ ಗಾಂಧಿ ಉದ್ಘಾಟಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆಗಳು ವ್ಯಕ್ತವಾಗುತ್ತಿವೆ.
ಸೋನಿಯಾ ಗಾಂಧಿಯವರು ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ.
ಈ ಸಂಬಂಧ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ಇದು ಸತ್ಯಕ್ಕೆ ದೂರವಾದದ್ದು. ಆ ರೀತಿಯ ಉದ್ದೇಶವಾಗಲೀ, ಪ್ರಸ್ತಾವನೆಯಾಗಲಿ ಸರ್ಕಾರದ ಮುಂದೆ ಇಲ್ಲ ಎಂದರು.. ಈ ಮೂಲಕ ಅಂತೆ ಕಂತೆಗಳಿಗೆ ತೆರೆ ಎಳೆಯಲಾಗಿದೆ.
ವರದಿಯಲ್ಲಿ ಸಿದ್ದರಾಮಯ್ಯ ಅವರು ಈ ಬಾರಿಯಾ ದಸರಾವನ್ನು ಉದ್ಘಾಟಿಸಲು ಬಯಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ. ಆದರೆ, ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಖುದ್ದು ಸಿಎಂ ದೆಹಲಿಗೆ ತೆರಳಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಆಹ್ವಾನ ನೀಡುವ ಸಾಧ್ಯತೆಗಳಿವೆ ಎಂದು ವರದಿ ಮಾಡಲಾಗಿತ್ತು.