Webdunia - Bharat's app for daily news and videos

Install App

ಬೆಂಗಳೂರು ನಗರ ಉಸ್ತುವಾರಿಗಾಗಿ ಕಿತ್ತಾಟ

Webdunia
ಸೋಮವಾರ, 11 ಅಕ್ಟೋಬರ್ 2021 (20:28 IST)
ದೇಶಭಕ್ತರ ಸರ್ಕಾರ ಬೆಂಗಳೂರು ನಗರ ಉಸ್ತುವಾರಿ ಸ್ಥಾನಕ್ಕಾಗಿ ಕಿತ್ತಾಟ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಂಗಳೂರು ಉಸ್ತುವಾರಿ ಲಾಭದಾಯಕ ಸ್ಥಾನವಾಗಿರುವುದರಿಂದ ಇಷ್ಟೆಲ್ಲಾ ಗಲಾಟೆಗಳಾಗುತ್ತಿದೆ ಎಂದರು.
 
ಜಿ.ಎಸ್.ಟಿ ಪರಿಹಾರ, ನಮ್ಮ ತೆರಿಗೆ ಪಾಲಿನ ಹಣವನ್ನು ರಾಜ್ಯ ಸರ್ಕಾರ ಗಟ್ಟಿಧ್ವನಿಯಲ್ಲಿ ಕೇಳಬೇಕು. ಇದೇನು ಭಿಕ್ಷೆಯಲ್ಲ, ನಮ್ಮ ಹಕ್ಕು.
ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಆಗುತ್ತಿದೆ. ಏಪ್ರಿಲ್ ಇಂದ ಸೆಪ್ಟೆಂಬರ್ ವರೆಗೆ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ 3,000 ಕೋಟಿ ರೂಪಾಯಿ ತೆರಿಗೆ ಹೆಚ್ಚು ಸಂಗ್ರಹವಾಗಿದೆ. ಸ್ಟಾಲಿನ್ ಸರ್ಕಾರ ಮೂರು ರೂಪಾಯಿ ತೆರಿಗೆ ಕಡಿಮೆ ಮಾಡಿದೆ, ನಮ್ಮ ರಾಜ್ಯದಲ್ಲಿ ಕನಿಷ್ಟ ಹತ್ತು ರೂಪಾಯಿ ಕಡಿಮೆ ಮಾಡಬೇಕು. ಆಗ ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗುತ್ತದೆ.
 
ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿಮೆ ಮಾಡಬೇಕು. ಕಳೆದ ಏಳು ವರ್ಷದಲ್ಲಿ ಪೆಟ್ರೋಲ್ ಡೀಸೆಲ್ ಮೇಲಿನ ಅಬಕಾರಿ ಸುಂಕ ಒಂದರಿಂದಲೇ ಕೇಂದ್ರ ಸರ್ಕಾರಕ್ಕೆ 23 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ.
 
ಕರ್ನಾಟಕವೊಂದರಿಂದಲೇ 1.20 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ. ಬಡವರ ಬಗ್ಗೆ ದೊಡ್ಡ ದೊಡ್ಡ ಮಾತನಾಡುವ ಬಿಜೆಪಿಯವರು ತೆರಿಗೆ ಕಡಿತ ಮಾಡಿ ಜನರಿಗೆ ಸಹಾಯ ಮಾಡಲಿ ಎಂದರು‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments