Webdunia - Bharat's app for daily news and videos

Install App

ಖಾಸಗಿ ಕಂಪನಿಗಳು ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ಲೈಸೆನ್ಸ್ ರದ್ದು : ಸಚಿವ ಡಾ. ಜಿ ಪರಮೇಶ್ವರ್

Webdunia
ಬುಧವಾರ, 24 ಮೇ 2023 (17:01 IST)
ಜಿಲ್ಲೆಯಲ್ಲಿರುವ ಖಾಸಗಿ ಕಂಪನಿಗಳು ಹಾಗೂ ಹೆಚ್ ಎ ಎಲ್ ಗಳಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕೊಡದಿದ್ದರೆ ಅವರ ಲೈಸೆನ್ಸ್ ಅನ್ನು ರದ್ದು ಮಾಡುತ್ತೇವೆ ಎಂದು ನೂತನ ಸಚಿವ ಡಾ.‌ ಜಿ. ಪರಮೇಶ್ವರ್ ತಿಳಿಸಿದ್ದಾರೆ.
 
ತುಮಕೂರಿನ ಕಾಂಗ್ರೆಸ್ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈಗಾಗಲೇ ಸ್ಥಳೀಯ ಯುವಕರಿಗೆ ಉದ್ಯೋಗ ಅವಕಾಶಗಳನ್ನು ನೀಡುತ್ತಿಲ್ಲ ಎಂಬ ಸಾಕಷ್ಟು ದೂರುಗಳು ಬಂದಿದ್ದು, ಈ ಕುರಿತಂತೆ ಚಿಂತನೆ ನಡೆಸಿ ಅಂತಹ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
 
ಕಾಂಗ್ರೆಸ್ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಲಿದೆ, ಅಲ್ಲದೆ ಸ್ಥಳೀಯ ಯುವಕರು ಉದ್ಯೋಗ ದೊರೆಯುತ್ತಿಲ್ಲ ಎಂಬ ಆತಂಕ ಪಡಬಾರದು  ಎಂಬ  ಭರವಸೆಯನ್ನು ಕೂಡ ನೀಡಿದರು.
 
ನಾನು ಯುವಕನಾಗಿದ್ದಾಗ ತುಮಕೂರು ನಗರದ ಜೂನಿಯರ್ ಕಾಲೇಜು ಗ್ರೌಂಡ್ ನಲ್ಲಿ ಅಥ್ಲೆಟಿಕ್ಸ್‌ನಲ್ಲಿ ಪಾಲ್ಗೊಳ್ಳಲು ಅಭ್ಯಾಸ ಮಾಡುತ್ತಿದ್ದೆ. ಅಲ್ಲಿಂದ ನಾನು ಬೆಂಗಳೂರಿಗೆ ಹೋದೆ. ನಂತರ ಬೆಂಗಳೂರಿನಿಂದ ಆಸ್ಟ್ರೇಲಿಯಕ್ಕೆ ಹೋದೆ. ಆ ನಂತರ ವಾಪಸ್ ನಾನು ನನ್ನ ಊರು ತುಮಕೂರಿಗೆ ಬಂದು ಸೇರಿದ್ದೇನೆ.  ಎಲ್ಲೆಲ್ಲೂ ಹೋಗಿ ಬಂದಿದ್ದೇನೆ. ಏನು ಮಾಡಲು ಆಗಲಿಲ್ಲ, ಹಾಗಾಗಿ ವಾಪಸ್ ತುಮಕೂರು ಹೊರವಲಯದ ಗೊಲ್ಲಹಳ್ಳಿಗೆ ಬಂದು ಸೇರಿದ್ದೇನೆ ಎಂದು ಹೇಳಿದರು.
 
ಈ ಮೂಲಕ ತುಮಕೂರು ಜನರ ಪ್ರೀತಿ ವಿಶ್ವಾಸವನ್ನು ನಾನು ಕಳೆದುಕೊಳ್ಳಲು ಇಷ್ಟಪಡಲಿಲ್ಲ ಎಂದು ಹೇಳಿದರು.ರಾಜ್ಯದ ವಿವಿದೆಡೆ ಅನೇಕ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಒತ್ತಾಯ ಮಾಡಿದರು. ಆದರೆ ನನಗೆ ನನ್ನ ಊರನ್ನು ಬಿಟ್ಟು ಹೋಗಲು ಮನಸ್ಸು ಬರಲಿಲ್ಲ ಹೀಗಾಗಿ ನಾನು ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದೆ ಎಂದು ಹೇಳಿದರು.
ನಾನು ಬೆಳೆದು ಬಂದಂತಹ ಊರು ಗೆಲ್ಲಲಿ, ಸೋಲಲಿ ಇಲ್ಲೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments