Webdunia - Bharat's app for daily news and videos

Install App

ರೇಷನ್ ಹಂಚಲು ಹಣ ಪಡೆದರೆ ಲೈಸನ್ಸ್ ಪರ್ಮನೆಂಟ್ ಕ್ಯಾನ್ಸಲ್

Webdunia
ಶುಕ್ರವಾರ, 10 ಏಪ್ರಿಲ್ 2020 (20:09 IST)
ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಪಡಿತರ ನೀಡಲು ಹಣ ಪಡೆದರೆ ನ್ಯಾಯಬೆಲೆ ಅಂಗಡಿಯ ಪರವಾನಿಗೆಯನ್ನು ಶಾಶ್ವತವಾಗಿ ರದ್ದುಗೊಳಿಸಲಾಗುತ್ತಿದೆ.

ಹೀಗಂತ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಆಹಾರ ಪೂರೈಕೆ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯ ಬೆಲೆ ಅಂಗಡಿಗಳವರು ಇಂತಹ ಸಂದರ್ಭದಲ್ಲಿ ಮಾನವೀಯತೆ ತೋರಿ, ಪಡಿತರವನ್ನು ಬಡವರಿಗೆ ಸರಿಯಾಗಿ ಹಂಚಬೇಕು. ಸಮಯ ಮಿತಿ ಇಲ್ಲದೆ ಪಡಿತರ ವಿತರಿಸಬೇಕು ಎಂದು ಪಡಿತರ ಅಂಗಡಿಗಳ ಮಾಲೀಕರಿಗೆ ಸೂಚಿಸಿದರು.

ಕೇಂದ್ರ ಸರ್ಕಾರದ ವತಿಯಿಂದ ನೀಡುತ್ತಿರುವ ಪಡಿತರವನ್ನು ಇದೇ ತಿಂಗಳಾಂತ್ಯದಲ್ಲಿ ವಿತರಿಸಲಾಗುವುದು, ಗ್ಯಾಸ್ ಸಹ ಉಚಿತವಾಗಿ ನೀಡಲಾಗುತ್ತಿದೆ. ಯಾರು ಸಹ ಹಣ ನೀಡುವ ಅವಶ್ಯಕತೆ ಇಲ್ಲ, ಪಡಿತರವನ್ನು ನಾಗರೀಕರಿಗೆ ಸರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಪ್ರವಾಸ ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ರಾಜ್ಯದಲ್ಲಿರುವ 19 ಸಾವಿರ ಪಡಿತರ ಅಂಗಡಿಗಳು ಸರಿಯಾಗಿ ಕಾರ್ಯನಿರ್ವಹಿಸದೇ ಇದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments