Webdunia - Bharat's app for daily news and videos

Install App

ಐದು ಗುಂಟೆ ಜಮೀನಿಗೆ ಸರ್ವೆ ನಕ್ಷೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಲೈಸೆನ್ಸ್ ಸರ್ವೆಯರ್

Webdunia
ಶುಕ್ರವಾರ, 1 ಅಕ್ಟೋಬರ್ 2021 (21:35 IST)
ಐದು ಗುಂಟೆ ಜಮೀನಿಗೆ ಸರ್ವೆ ನಕ್ಷೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಲೈಸೆನ್ಸ್  ಸರ್ವೆಯರ್ ಅನ್ನು ರೆಡ್‍ಹ್ಯಾಂಡ್ ಆಗಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ. 
ಬೆಂಗಳೂರು ದಕ್ಷಿಣ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿಯ ಲೈಸೆನ್ಸ್ ಸರ್ವೆಯರ್ ಜಿ. ಬಸವರಾಜು ಬಂಧಿತ ಆರೋಪಿ. ಭ್ರಷ್ಟಾಚಾರ ತಡಡೆ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದರು. 
ಬೆಂಗಳೂರು ದಕ್ಷಿಣ ತಾಲೂಕು ಉತ್ತರಹಳ್ಳಿ ಹೋಬಳಿಯ ಗುಳಕಮಲೆಯ ನಿವಾಸಿಯೊಬ್ಬರು ಗುಳಕಮಲೆ ಗ್ರಾಮದ ಸರ್ವೆ ನಂ.119/15ರಲ್ಲಿ  5 ಗುಂಟೆ ಜಮೀನನ್ನು ಖರೀದಿಸಲು ಕರಾರು ಪತ್ರ ಮಾಡಿಕೊಂಡಿದ್ದರು. ಕ್ರಯ ಪತ್ರಕ್ಕೆ ಸ್ಕೆಚ್ ಬೇಕಾಗಿದ್ದರಿಂದ ಉತ್ತರಹಳ್ಳಿ ನಾಡ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಬೆಂಗಳೂರು ದಕ್ಷಿಣ ತಾಲ್ಲೂಕಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಲೈಸೆನ್ಸ್  ಸರ್ವೆಯರ್‍ಜಿ. ಬಸವರಾಜು, 5 ಗುಂಟೆಗೆ ಸ್ಕೆಚ್ ಮಾಡಿಕೊಡಲು 45 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಚೌಕಾಸಿ ಮಾಡಿ 22 ಸಾವಿರ ರೂ.ಗೆ ಒಪ್ಪಿ ಮುಂಗಡವಾಗಿ 10 ಸಾವಿರ ರೂ. ಪಡೆದುಕೊಂಡಿದ್ದರು. ಉಳಿಕೆ 12 ಸಾವಿರ ರೂ. ಕೊಡುವಂತೆ ಬೇಡಿಕೆ ಒಡ್ಡಿದ್ದರು.
ಈ ಬಗ್ಗೆ ಅರ್ಜಿದಾರ ಕೊಟ್ಟ ದೂರಿನ ಮೇರೆಗೆ ರಾಮನಗರ ಜಿಲ್ಲಾ ಎಸಿಬಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು, ಗುರುವಾರ ಬೆಂಗಳೂರು ದಕ್ಷಿಣ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ 12 ಸಾವಿರ ರೂ. ಪಡೆಯುತ್ತಿದ್ದಾಗ ಬಸವರಾಜುನನ್ನು ಬಂಧಿಸಿರುವುದಾಗಿ ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments