ಮನೆಗೆ ನುಗ್ಗಿದ ನೀರು.. ಜೀವನ ಸಂಕಷ್ಟ

Webdunia
ಮಂಗಳವಾರ, 6 ಸೆಪ್ಟಂಬರ್ 2022 (15:33 IST)

ಪ್ರವಾಹದಂತೆ ಮಳೆ ನೀರು ಹರಿದು ಹೋಗುತ್ತಿದ್ದು, ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿಗಳಿಗೆ ಹಾನಿ ಸಂಭವಿಸಿದೆ. ಅದರಂತೆ ಸೋಮವಾರ ಸುರಿದ ಮಳೆಗೆ ಗದಗ ಜಿಲ್ಲೆಯಲ್ಲಿ ಅವಾಂತರವೇ ಸೃಷ್ಟಿಯಾಗಿದ್ದು, ಸಿಹಿಹಳ್ಳ ಹಾಗೂ ಸೌಳ ಹಳ್ಳಗಳು ಉಕ್ಕಿ ಹರಿದಿವೆ. ಇನ್ನೊಂದೆಡೆ ಗದಗ ತಾಲೂಕಿನ ಮದಗಾನೂರ ಗ್ರಾಮದಲ್ಲಿ 500ಕ್ಕೂ ಹೆಚ್ಚು ಮನೆಗೆ ಮಳೆ ನೀರು ನುಗ್ಗಿದ್ದು, ರಾತ್ರೋ ರಾತ್ರಿ ರೈತರು ದಿಕ್ಕೆಟ್ಟಿದ್ದಾರೆ. ಬಹುತೇಕ ರೈತರ ಮನೆಯಲ್ಲಿನ ಧಾನ್ಯದರಾಶಿ ಹಾಳಾಗಿದ್ದು, ದಿನಬಳಕೆಯ ವಸ್ತುಗಳು ನೀರುಪಾಲಾಗಿವೆ. ಶೇಂಗಾ, ಈರುಳ್ಳಿ, ಮೆಣಸಿನಕಾಯಿ ಸೇರಿ ಇತರೆ ಬೆಳೆಗಳು ನೀರಿನಲ್ಲಿ ಕೊಚ್ಚಿಹೋಗಿವೆ.

ಗದಗ ಮತ್ತು ಬೆಟಗೇರಿ ಅವಳಿ ನಗರದಲ್ಲಿ ಜಲಪ್ರಳಯ ಸಂಭವಿಸಿದ್ದು, ಅನೇಕ ಪ್ರದೇಶಗಳಲ್ಲಿ ಜನರ ಜೀವನ ಅಸ್ತವ್ಯಸ್ಥಗೊಂಡಿತು. ಈ ನಿಟ್ಟಿನಲ್ಲಿ ತಡರಾತ್ರಿಯೇ ಕಾರ್ಯಪ್ರವೃತ್ತರಾದ ಜಿಲ್ಲಾಧಿಕಾರಿ ವೈಶಾಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ಕಾರ್ಯಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವಳಿ ನಗರದ ಮಂಜುನಾಥ್, ಅಂಬೇಡ್ಕರ್, ಗಂಗೀಮಡಿ ಬಡಾವಣೆ, ಭಜಂತ್ರಿ ಓಣಿ ಸೇರಿ ಹಲವಡೆ ಸಾಕಷ್ಟು ಸಮಸ್ಯೆಗಳಾಗಿದ್ದು, ನೂರಾರು ಮನೆಗಳಿಗೆ ನೀರು ನುಗ್ಗಿದೆ. ಮನೆಗಳಿಗೆ ನೀರು ನುಗ್ಗಿ ಅಪಾಯದಲ್ಲಿ ಸಿಲುಕಿದ್ದವರ ರಕ್ಷಣಾ ಕಾರ್ಯ ನಡೆದಿದ್ದು, ರಾತ್ರಿ ಕಳೆಯಲು ಜನರಿಗೆ ವಿವಿಧ ಕಲ್ಯಾಣ ಮಂಟಪಗಳಲ್ಲಿ ವ್ಯವಸ್ಥೆ ನಡೆಸಲಾಯಿತು. ಇಲ್ಲಿ ಊಟದ ವ್ಯವಸ್ಥೆಯನ್ನೂ ಕಲ್ಪಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments