Webdunia - Bharat's app for daily news and videos

Install App

ರಾಜಧಾನಿಗರಿಗೆ ಜೀವಜಲ ಇನ್ನೂ ತುಟ್ಟಿ!

Webdunia
ಗುರುವಾರ, 10 ಜನವರಿ 2019 (15:29 IST)
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಕಂಗಾಲಾಗಿರುವ ಜನರಿಗೆ ನೀರಿನ ದರ ಹೆಚ್ಚಳ ಮೂಲಕ ಶಾಕ್ ನೀಡಲು ಜಲಮಂಡಲಿ ಸಿದ್ಧತೆ ನಡೆಸಿದೆ.   

ವಿದ್ಯುತ್ ದರ ಏರಿಕೆ, ಪೆಟ್ರೋಲ್, ಡೀಸೆಲ್ ದರ ಏರಿಕೆ, ಆಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆಯ ಬೆನ್ನ ಹಿಂದೆಯೇ ಬೆಂಗಳೂರು ನಗರದ ನಾಗರಿಕರಿಗೆ ನೀರಿನ ದರ ಏರಿಕೆಯ ಬರೆ ಹಾಕಲು ಜಲಮಂಡಳಿ ಮುಂದಾಗಿದೆ.

ಬೆಂಗಳೂರು ನಗರದ ನಾಗರಿಕರಿಗೆ ಕುಡಿಯುವ ನೀರು ಒದಗಿಸುವ ಬೆಂಗಳೂರು ಜಲಮಂಡಳಿ ನೀರಿನ ದರವನ್ನು ಶೇ. 30 ರಿಂದ 35ರಷ್ಟು ಹೆಚ್ಚಿಸಲು ಮುಂದಾಗಿದ್ದು,  ದರ ಏರಿಕೆ ಸಂಬಂಧ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆಸಿದೆ.
ಜಲಮಂಡಳಿ ಕಳೆದ ನಾಲ್ಕು ವರ್ಷಗಳಿಂದ ನೀರಿನ ದರವನ್ನು ಏರಿಕೆ ಮಾಡಿಲ್ಲ. ಹಾಗಾಗಿ ಶೇ. 30 ರಿಂದ 35 ರಷ್ಟು ದರ ಏರಿಕೆಗೆ ಅನಿವಾರ್ಯವಾಗಿದ್ದು ಸರ್ಕಾರ ಅನುಮತಿ ಪಡೆಯಲು ಎಂದು ಜಲಮಂಡಳಿ ಪ್ರಸ್ತಾವನೆಯಲ್ಲಿ ರಾಜ್ಯ ಸರ್ಕಾರವನ್ನು ಕೋರಲಿದೆ.

ಸದ್ಯ ಜಲಮಂಡಳಿ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದೆ. ಆರ್ಥಿಕ ಸಂಕಷ್ಟದಿಂದ ಪಾರಾಗಲು ದರ ಏರಿಕೆ ಅನಿವಾರ್ಯ. ಹಾಗಾಗಿ ಶೇ. 30 ರಿಂದ 35 ರಷ್ಟು ದರ ಏರಿಕೆಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜಲಮಂಡಳಿ ಮೂಲಗಳು ಹೇಳಿವೆ.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ದರವನ್ನು ಏರಿಕೆ ಮಾಡಲಾಗಿದೆ. ದೇಶದಲ್ಲಿ ಪೆಟ್ರೋಲ್ ಡೀಸೆಲ್ ದರ ಇಳಿಮುಖವಾದರೂ ಕಳೆದ ವಾರವಷ್ಟೆ ಪೆಟ್ರೋಲ್, ಡೀಸೆಲ್ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿತ್ತು. ಆಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದ್ದು, ಇದರಿಂದ ಬರುವ ಫೆ. 1 ರಿಂದ ಆಸ್ತಿ ತೆರಿಗೆಯ ನೋಂದಣಿ ಶುಲ್ಕಗಳು ಹೆಚ್ಚಾಗಲಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments