Publish Date: Mon, 12 Mar 2018 (09:06 IST)
Updated Date: Mon, 12 Mar 2018 (09:08 IST)
ಬೆಂಗಳೂರು: ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಜೀವ ಬೆದರಿಕೆ ಕರೆಗಳು ನಿರಂತರವಾಗಿ ಬರುತ್ತಿವೆಯಂತೆ. ಹಾಗಂತ ಅವರೇ ಹೇಳಿಕೊಂಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಯಾರೋ ದುಷ್ಕರ್ಮಿಗಳು ನಿರಂತರವಾಗಿ ಕರೆ ಮಾಡಿ ನನಗೆ ಜೀವ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಖರ್ಗೆ ಹೇಳಿಕೊಂಡಿದ್ದಾರೆ.
ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣದಲ್ಲೂ ತಮ್ಮ ಬಗ್ಗೆ ಟೀಕೆಗಳು ಬರುತ್ತಿವೆ. ಇದೆಲ್ಲದರ ಬಗ್ಗೆ ಖರ್ಗೆ ಆಪ್ತ ಸಹಾಯಕ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರಂತೆ. ಅಷ್ಟೇ ಅಲ್ಲ, ಕೇಂದ್ರ ಗೃಹ ಸಚಿವರ ಬಳಿಯೂ ನಾನು ಈ ಬಗ್ಗೆ ಚರ್ಚೆ ಮಾಡಿದ್ದೇನೆ ಎಂದು ಖರ್ಗೆ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ