Select Your Language

Notifications

webdunia
webdunia
webdunia
webdunia

ಉತ್ತರಪ್ರದೇಶದ ಸಿಎಂ ಯೋಗಿ​ಗೆ ಜೀವ ಬೆದರಿಕೆ..!

ಉತ್ತರಪ್ರದೇಶದ ಸಿಎಂ ಯೋಗಿ​ಗೆ ಜೀವ ಬೆದರಿಕೆ..!
ಉತ್ತರಪ್ರದೇಶ , ಭಾನುವಾರ, 21 ಆಗಸ್ಟ್ 2022 (21:41 IST)
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ದೇಶದೆಲ್ಲೆಡೆ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದುತ್ವ ಪರ ಹೋರಾಟಗಾರರು ಆದರ್ಶ ಎಂದು ಭಾವಿಸುತ್ತಾರೆ. ಕರ್ನಾಟಕದಲ್ಲಿಯೂ ಕರಾವಳಿಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯಾದ ನಂತರದ ಪ್ರತಿಭಟನಾ ಮೆರವಣಿಗೆಯಲ್ಲಿ ‘ಯೋಗಿ, ಯೋಗಿ’ ಎಂದು ಘೋಷಣೆ ಕೂಗಿದ್ದರು.ಯೋಗಿ ಆದಿತ್ಯನಾಥ್ ಅವರ ವ್ಯಕ್ತಿತ್ವ ಹಾಗೂ ಆಡಳಿತ ವೈಖರಿಗೆ ಹಿಂದುತ್ವವಾದಿಗಳ ಮೆಚ್ಚುಗೆ ಇರುವುದನ್ನು ಈ ಬೆಳವಣಿಗೆಗಳು ಸಾರಿ ಹೇಳಿದ್ದವು.ಇದೀಗ ಉತ್ತರ ಪ್ರದೇಶದ ನಾಗರಿಕ ಆತ್ಮಪ್ರಕಾಶ್​ ಪಂಡಿತ್ ಎಂಬಾತನ ಫೇಸ್​ಬುಕ್ ಖಾತೆಯಲ್ಲಿ ಪ್ರಕಟವಾಗಿರುವ ಪೋಸ್ಟ್ ದೊಡ್ಡಮಟ್ಟದಲ್ಲಿ ಸುದ್ದಿಯಾಗಿದೆ. ಈ ಪೋಸ್ಟ್​ನಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಶಿರಚ್ಛೇದದ ಬೆದರಿಕೆ ಹಾಕಲಾಗಿದೆ. ‘ತನ್ನ ಫೇಸ್​ಬುಕ್ ಖಾತೆ ದುರ್ಬಳಕೆ ಆಗಿದೆ’ ಎಂದು ತನಿಖೆ ವೇಳೆ ಅವರು ಸೈಬರ್​ ​ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೈಬರ್ ಠಾಣೆ ಪೊಲೀಸರು ಪ್ರಕರಣ ದಾಖಲಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರವಾಹದ ರಭಸಕ್ಕೆ ಕೊಚ್ಚಿಹೋದ ರೈಲು ಸೇತುವೆ